Webdunia - Bharat's app for daily news and videos

Install App

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

Krishnaveni K
ಶುಕ್ರವಾರ, 30 ಮೇ 2025 (11:02 IST)
ಬೆಂಗಳೂರು: ಕೆಎಸ್ ಆರ್ ಟಿಸಿ ಸಾರ್ವಜನಿಕರಿಗಾಗಿ ವಾರಂತ್ಯದಲ್ಲಿ ಹೊಸ ಟೂರ್ ಪ್ಯಾಕೇಜ್ ಒಂದನ್ನು ಘೋಷಿಸಿದೆ. ಈ ಪ್ಯಾಕೇಜ್ ನಲ್ಲಿ ಮೂರು ಸ್ಥಳಗಳಿಗೆ ಕಡಿಮೆ ವೆಚ್ಚದಲ್ಲಿ ಹೋಗಿ ಬರಬಹುದು. ಅದರ ವಿವರ ಇಲ್ಲಿದೆ ನೋಡಿ.

ಬಿಎಂಟಿಸಿ ಬೆಂಗಳೂರು ಆಸುಪಾಸಿಗರಿಗಾಗಿ 450 ರೂ. ದರದಲ್ಲಿ ಟೆಂಪಲ್ ಟೂರ್ ಪ್ಯಾಕೇಜ್ ಘೋಷಿಸಿದೆ. ಅದೇ ರೀತಿ ಕೆಎಸ್ ಆರ್ ಟಿಸಿಯಿಂದಲೂ ವಾರಂತ್ಯಕ್ಕೆ ಹೊಸ ಟೆಂಟಲ್ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಇದರ ವಿಶೇಷತೆಯೇನು ನೋಡಿ.

ಅಶ್ವಮೇಧ ಐಷಾರಾಮಿ ಬಸ್ ನಲ್ಲಿ 350 ಕಿ.ಮೀ. ವ್ಯಾಪ್ತಿಯಲ್ಲಿರುವ ಬೆಂಗಳೂರಿಗೆ ಸಮೀಪದಲ್ಲೇ ಇರುವ ಶ್ರೀರಂಗಪಟ್ಟಣ, ಮೇಲುಕೋಟೆ, ನಿಮಿಷಾಂಬ ದೇವಾಲಯ, ಕಲ್ಲಹಳ್ಳಿ ಭೂ ವರಾಹ ಸ್ವಾಮಿ ದೇವಾಲಯ, ತಂಗಿ ಕೊಳ, ಅಕ್ಕ ಕೊಳ, ರಾಯಗೋಪುರಂ ಸ್ಥಳಗಳನ್ನು ಒಂದು ದಿನದಲ್ಲಿ ಸಂದರ್ಶಿಸಬಹುದು. ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ ಬೆಂಗಳೂರಿಗೆ ವಾಪಸ್ ಆಗಬಹುದಾಗಿದೆ. ಇದಕ್ಕಾಗಿ ವಯಸ್ಕರಿಗೆ 670 ರೂ. ಮತ್ತು ಮಕ್ಕಳಿಗೆ 500 ರೂ. ದರ ನಿಗದಿಪಡಿಸಲಾಗಿದೆ.

ಆದರೆ ಗಮನಿಸಿ, ಈ ಪ್ಯಾಕೇಜ್ ನಲ್ಲಿ ಊಟ, ದರ್ಶನ ಶುಲ್ಕ ಸೇರಿರುವುದಿಲ್ಲ. ಮೇ 31 ರಿಂದ ವಾರಂತ್ಯದಲ್ಲಿ ಈ ಟೂರ್ ಪ್ಯಾಕೇಜ್ ಲಭ್ಯವಿರಲಿದೆ. ಇದಕ್ಕಾಗಿ ಕೆಎಸ್ ಆರ್ ಟಿಸಿ ವೆಬ್ ಸೈಟ್ http://www.ksrtc.in/ ರಲ್ಲಿ ಅಥವಾ ಕೆಎಸ್ ಆರ್ ಟಿಸಿ ಸಹಾಯವಾಣಿ 26252625/ 7760990100/7760990560/7760990287 ಸಂಖ್ಯೆಗೆ ಕರೆ ಮಾಡಿ ಬುಕಿಂಗ್ ಮಾಡಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments