Daily Horoscope

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

Krishnaveni K
ಗುರುವಾರ, 19 ಫೆಬ್ರವರಿ 2026 (18:14 IST)
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರ ಹಿಂಪಡೆದಿದ್ದಾರೆ. ಇದರಿಂದ ಸಾರಿಗೆ ಬಸ್ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.

ಇಂದು ಸಂಜೆ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ಚಲೋಗೆ ಕರೆ ಕೊಟ್ಟಿದ್ದ ನೌಕರರ ಸಂಘ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿತ್ತು. ಮುಷ್ಕರದಲ್ಲಿ ನಾಲ್ಕೂ ಸಾರಿಗೆ ನಿಗಮದ ನೌಕರರು ಭಾಗಿಯಾಗಲಿದ್ದರು.

ಆದರೆ ನಿನ್ನೆ ರಾಜ್ಯ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿಸಿತ್ತು. ಹಾಗಿದ್ದರೂ 38 ತಿಂಗಳ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರು ಮುಷ್ಕರ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದರು. ಆದರೆ ಈಗ ಸರ್ಕಾರಕ್ಕೆ ಷರತ್ತು ವಿಧಿಸಿ ಮುಷ್ಕರ ಸದ್ಯಕ್ಕೆ ಹಿಂಪಡೆದಿದ್ದಾರೆ.

ಕೆಎಸ್ಆರ್ ಟಿಸಿ ಎಂಡಿ ಇಂದು ಮುಷ್ಕರ ನಡೆಸುತ್ತಿದ್ದ ನೌಕರರ ಬಳಿ ತೆರಳಿ ಸಂಧಾನ ಸಭೆ ನಡೆಸಿದ್ದಾರೆ. ಇದಾದ ಬಳಿಕ ತಮ್ಮ ಬೇಡಿಕೆ ಈಡೇರಿಸಲು ಡೆಡ್ ಲೈನ್ ನೀಡಿದ ನೌಕರರು ಸದ್ಯಕ್ಕೆ ಮುಷ್ಕರ ಹಿಂಪಡೆಯುವುದಾಗಿ ಹೇಳಿದ್ದಾರೆ. ಹೀಗಾಗಿ ನಾಳೆ ಯಥಾ ಪ್ರಕಾರ ಸಾರಿಗೆ ಬಸ್ ಗಳು ಸಂಚಾರ ನಡೆಸಲಿವೆ. ಇದರಿಂದ ಪ್ರಯಾಣಿಕರಿಗೂ ನೆಮ್ಮದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments