Webdunia - Bharat's app for daily news and videos

Install App

ಕೂಡಲ ಸಂಗಮಕ್ಕೆ ನಾಳೆಯಿಂದ ಭಕ್ತರಿಗೆ ಪ್ರವೇಶ

Webdunia
ಭಾನುವಾರ, 4 ಜುಲೈ 2021 (20:25 IST)
ಕೊರೊನಾ ಲಾಕ್ ಡೌನ್ ಹಿನ್ನಲೆ ಕಳೆದ ಎರಡು ತಿಂಗಳನಿಂದ ಸಂಗಮನಾಥ ದೇವರಿಗೆ ದರ್ಶನ ಭಾಗ್ಯ ಬಂದ ಮಾಡಲಾಗಿತ್ತು. ಸರ್ಕಾರ ನಾಳೆ ಲಾಕ್ ಡೌನ್ ಓಪನ್ ಮಾಡಿದ ಹಿನ್ನಲೆ ದೇವಾಲಯಕ್ಕೂ ಅನುಮತಿ ದೂರಕಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾಗಿದ್ದ ಕೂಡಲಸಂಗಮ ದ ಸಂಗಮನಾಥ ದರ್ಶನ ಸಿಗಲಿದೆ.ಅಭಿವೃದ್ಧಿ ಪ್ರಾಧಿಕಾರ ಮಂಡಳಿ ವತಿಯಿಂದ ಸಿಬ್ಬಂದಿ ಗಳ ಮೂಲಕ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಪ್ರಮುಖ ಸಂಚಾರದಲ್ಲಿ ಸ್ಯಾನಿಟೆಜರ್ ಸಿಂಪಡಣೆ ಮಾಡಿ ಸ್ವಚ್ಚತಾ ಕಾರ್ಯ ಮಾಡಲಾಗುತ್ತದೆ. ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ಮೂರು ನದಿಗಳ ಸಂಗಮ ಆಗಿರುವುದರಿಂದ ರಾಜ್ಯ ಹಾಗೂ ಪರ ರಾಜ್ಯದಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.
ಕೊರೊನಾ ಹಿನ್ನಲೆ ಎಲ್ಲವೂ ಬಂದ ಆಗಿತ್ತು. ನಾಳೆ ಪ್ರಾರಂಭವಾದರೂ ಬೆಳ್ಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶ ಮಾಡಲಾಗಿದೆ. ತ್ರಿವೇಣಿ ಸಂಗಮ ನದಿಯಲ್ಲಿ ಸ್ಥಾನ ಮಾಡಲು ನಿಷೇಧ ಮಾಡಲಾಗಿದೆ.ನದಿಯ ದಡದಲ್ಲಿ ಸಿಬ್ಬಂದಿಗಳ ಕಾವಲು ಹಾಕಲಾಗಿದೆ.ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ ಹಾಗೂ ಸ್ಯಾನಿಟೆಜರ್ ಬಳಕೆ ಮಾಡಬೇಕು, ಸಾಮಾಜಿಕ ಅಂತರದಿಂದ ಸಂಗಮನಾಥನ ದರ್ಶನ ಪಡೆಯಬೇಕು ಎಂದು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ಮಂಡಳಿ ಆಯುಕ್ತರಾದ ರಘುನಾಥ್ ಎ.ಇ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments