Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಕೂಡಲಸಂಗಮ ಶ್ರೀ ಕಿಡಿ

Webdunia
ಶುಕ್ರವಾರ, 19 ಅಕ್ಟೋಬರ್ 2018 (20:06 IST)
ಸಿದ್ದರಾಮಯ್ಯಗೆ ಆಗದ ಕೆಲವರು ಲಿಂಗಾಯತ ಧರ್ಮ ಸ್ವತಂತ್ರ ಧರ್ಮವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ವಾಗ್ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದ ಶರಣ ವಿಜಯೋತ್ಸವ ನಾಡಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೂಡಲಸಂಗಮ ಶ್ರೀಗಳು, ಲಿಂಗಾಯತ  ಸ್ವತಂತ್ರ ಧರ್ಮಕ್ಕೆ ಮಾನ್ಯತೆಗೆ ಶಿಫಾರಸು ಮಾಡಿದ್ದು ಸರ್ಕಾರದಿಂದ ಅಪರಾಧವಾಗಿದೆ ಎಂದು ಹೇಳಿಕೆ ನೀಡಿದ ಸಚಿವ ಡಿ.ಕೆ .ಶಿವಕುಮಾರ್ ವಿರುದ್ಧ ಕಿಡಿ ಕಾರಿದರು.

ದಿನೇ ದಿನೇ ಸಿದ್ದರಾಮಯ್ಯನವರ ವರ್ಚಸ್ಸು, ಪ್ರಭಾವ ಹೆಚ್ಚಾಗುತ್ತಿದ್ದು, ಅವರಿಗೆ ಆಗದೆ ಇರುವ ಕೆಲವರು ಇದನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆಶಿ ವಿರುದ್ದ ವಾಗ್ದಾಳಿ ನಡೆಸಿದರು.

ಡಿಕೆಶಿಗೆ ಲಿಂಗಾಯತರ ಬಗ್ಗೆ ಮಾಹಿತಿಯ ಕೊರತೆ ಇದ್ದು, ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.  ಸಿದ್ದರಾಮಯ್ಯನವರು ಲಿಂಗಾಯತ ಸ್ವತಂತ್ರ  ಧರ್ಮಕ್ಕೆ ಶಿಫಾರಸು ಮಾಡಿದಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸೀಟು ಬಂದಿದ್ದು ವಿನಾಕಾರಣ ಚುನಾವಣೆ ಹಾಗೂ ಧರ್ಮವನ್ನು ಮೇಳಯಿಸುವ ಕೆಲಸ ಮಾಡುತ್ತಿದ್ದಾರೆ ಎಂದು  ಮಾಜಿ ಸಿಎಂರನ್ನು ಹೊಗಳುತ್ತಾ, ಸಚಿವ ಡಿಕೆ ಶಿವಕುಮಾರ್  ವಿರುದ್ದ ಕೂಡಲಸಂಗಮ ಶ್ರೀಗಳು ವಾಗ್ದಾಳಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments