Webdunia - Bharat's app for daily news and videos

Install App

ಬೆಂಗಳೂರು-ಮಂಗಳೂರು ಕುಡ್ಲ ಎಕ್ಸ್`ಪ್ರೆಸ್`ಗೆ ಚಾಲನೆ

Webdunia
ಭಾನುವಾರ, 9 ಏಪ್ರಿಲ್ 2017 (15:44 IST)
ಬೆಂಗಳೂರು-ಮಂಗಳೂರು ಕುಡ್ಲ ಎಕ್ಸ್`ಪ್ರೆಸ್ ಹಗಲು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್`ನಲ್ಲಿ ಚಾಲನೆ ಸಿಕ್ಕಿದೆ. ಗೋವಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲ್ವೆ ಸಚಿವ ಸುರೇಶ್ ಪ್ರಭು ರೈಲ್ವೆ ಸಂಚಾರಕ್ಕೆ ಚಾಲನೆ ನೀಡಿದರು. ಈ ಹೊಸ ರೈಲು ಕೇವಲ 9 ಗಂಟೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತಲುಪಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಹಾಜರಿದ್ದರು.

ನೆಲಮಂಗಲ-ಶ್ರವಣಬೆಳಗೊಳ-ಹಾಸನ ಮಾರ್ಗವಾಗಿ ಈ ರೈಲು ಸಂಚರಿಸಲಿದೆ. ಭಾನುವಾರ, ಮಂಗಳವಾರ ಮತ್ತು ಗುರುವಾರ ಬೆಂಗಳೂರಿಂದ ಮಂಗಳೂರಿಗೆ(ಬೆಳಗ್ಗೆ 7ಕ್ಕೆ ಯಶವಂತಪುರದಿಂದ ಹೊರಟು ಸಂಜೆ 5.45ಕ್ಕೆ ಮಂಗಳೂರು ತಲುಪಲಿದೆ) ಮತ್ತು ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಂಗಳೂರಿನಿಂದ ಬೆಂಗಳೂರಿಗೆ(ಬೆಳಗ್ಗೆ 11.15ಕ್ಕೆ ಹೊರಟು ರಾತ್ರಿ10ಕ್ಕೆ ಸೇರಲಿದೆ) ಸಂಚರಿಸಲಿದೆ.

ಈ ರೈಲು ಮಾರ್ಗ ಆರಂಭವಾದ ಬಳಿಕ ಮಂಗಳೂರಿನ ಸಂಚಾರ ಮಂಗಳೂರು ಮತ್ತು ಬೆಂಗಳೂರು ನಡುವೆ 87 ಕಿ.ಮೀನಷ್ಟು ಸಂಚಾರ ಕಡಿಮೆಯಾಗಲಿದ್ದು, 3 ಗಂಟೆ ಪ್ರಯಾಣದ ಸಮಯ ತಗ್ಗಲಿದೆ. ರಾತ್ರಿ ಸಂಚರಿಸುವ ಮಂಗಲೂರು ಮತ್ತು ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಹೂಗುವುದರಿಂದ ಹೆಚ್ಚುವರಿ ಸುತ್ತಾಗುತ್ತಿದೆ.

ಬೆಳಗಿನ ರೈಲು: ಸದ್ಯ ಮಂಗಳೂರಿಗೆ ರಾತ್ರಿ ರೈಲು ಸಂಚಾರ ಮಾತ್ರವಿದ್ದು, ನಾಳೆಯಿಂದ ಆರಂಭವಾಗಲಿರುವ ಕುಡ್ಲ ಎಕ್ಸ್`ಪ್ರೆಸ್ ರೈಲು ಬೆಳಗಿನ ಹೊತ್ತು ಸಂಚರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರ ಹಲವು ದಿನಗಳ ಕನಸು ನನಸಾಗಿದೆ.
ರೈಲು ಬೆಳಗಿನ ಸಂಚಾರದಿಂದ ಮಾರ್ಗಮಧ್ಯೆ ಸಿಗುವ ಪ್ರಾಕೃತಿಕ ಸೌಂದರ್ಯ ಸವಿಯುವ ಅವಕಾಶ ಪ್ರಯಾಣಿಕರಿಗೆ ಸಿಗಲಿದೆ. ಬೆಟ್ಟಗುಡ್ಡ, ಗುಹೆಗಳು, ಝರಿಗಳನ್ನ ನೋಡುವ ಭಾಗ್ಯ ಸಿಗಲಿದೆ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments