Webdunia - Bharat's app for daily news and videos

Install App

ಕುಕ್ಕೆ ಸುಬ್ರಹ್ಮಣ್ಯ ಬಂದ್; ಕಾರಣ ಏನು?

Webdunia
ಶುಕ್ರವಾರ, 1 ಮಾರ್ಚ್ 2019 (20:44 IST)
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ನರಸಿಂಹಸ್ವಾಮಿ ಮಠದ ತೆಕ್ಕೆಗೆ ತೆಗೆದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ವಿರುದ್ಧ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸುವಂತೆ ಆಗ್ರಹಿಸಿ ಮಾ. 7 ರಂದು ಸುಬ್ರಹ್ಮಣ್ಯ ಬಂದ್ಗೆ ಕರೆ ನೀಡಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದೆ. ಅಲ್ಲದೆ ಶಾಂತಿಯು ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಲಿದೆ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ್ ಅವರು ಭಕ್ತರ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.

ದೇವಸ್ಥಾನವನ್ನು ಎಂದಿಗೂ ಮಠಕ್ಕೆ ಸೇರಿಸಲು ಬಿಡುವುದಿಲ್ಲ. ರಾಜಕಾರಣಿಗಳು ಮಠಗಳ ಜೊತೆಗೆ ಸಂಪರ್ಕವಿಟ್ಟುಕೊಂಡಿದ್ದಾರೆ.  ಹಾಗಾಗಿ ಸುಬ್ರಹ್ಮಣ್ಯ ದೇವಸ್ಥಾನವನ್ನು ಮಠಕ್ಕೆ ಬಿಟ್ಟುಕೊಡುವಂತೆ ಬೇಡಿಕೆ ಇಟ್ಟವಿಚಾರದಲ್ಲಿ ಯಾವ ರಾಜಕಾರಣಿಗಳು ಧ್ವನಿಎತ್ತುತ್ತಿಲ್ಲ. ಇದು ಅಪಾಯದ ಸಂಕೇತ ಎಂದು ಆರೋಪಿಸಿದರು.

ಮಠದವರು ದೇವಸ್ಥಾನವನ್ನು ವಶಕ್ಕೆ ಪಡೆಯಲು ಹಿಂದೆಯೇ ಯೋಜನೆ ರೂಪಿಸಿದ್ದರು. ಇಂದು ಧರ್ಮದ ಬಗ್ಗೆ ಕಾಳಜಿಯಿರುವ ಯಾವುದೇ ಯತಿಗಳು ಹಣದ ವ್ಯಾಮೋಹಕ್ಕೆ ಬಿದ್ದಿಲ್ಲ. ಸಂಘ ಪರಿಹಾರ ಮಠದ ಪರವಾಗಿಲ್ಲ ಎಂದು ಕಿಶೋರ್ ಶಿರಾಡಿ  ದೂರಿದರು.

ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆಯ ಶಿವರಾಂ ರೈ ಮಾತನಾಡಿ, ಕಾನೂನು ಮತ್ತು ಧರ್ಮದ ತಳಹದಿಯಲ್ಲಿ ಹೋರಾಟ ನಡೆಸಬೇಕಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments