ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

Krishnaveni K
ಗುರುವಾರ, 4 ಡಿಸೆಂಬರ್ 2025 (11:06 IST)
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೀರಾಟವಾಡುತ್ತಿದ್ದ ಆನೆಗೆ ಅಡ್ಡಿಪಡಿಸಿದ್ದಕ್ಕೆ ಸಿಬ್ಬಂದಿಗೆ ಮಾಡಿದ್ದೇನು ಗೊತ್ತಾ? ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಈಗ ಚಂಪಾ ಷಷ್ಠಿಯ ಜಾತ್ರಾ ಮಹೋತ್ಸವದ ಸಂದರ್ಭ. ಸಾಮಾನ್ಯವಾಗಿ ಈ ಸಂದರ್ಭದಲ್ಲಿ ನೀರು ಬಂಡಿ ಉತ್ಸವವಿರುತ್ತದೆ. ಈ ಸಂದರ್ಭದಲ್ಲಿ ದೇವಾಲಯದ ಆನೆ ನೀರಾಟವಾಡುವುದನ್ನು ನೋಡುವುದೇ ಖುಷಿ.

ಇಂತಹದ್ದೇ ಸಂದರ್ಭದಲ್ಲಿ ಆನೆ ಭಕ್ತರೊಂದಿಗೆ ನೀರೆರಚಿಕೊಂಡು ಆಡುವುದರಲ್ಲಿ ತಲ್ಲೀನವಾಗಿತ್ತು. ಆದರೆ ಈ ವೇಳೆ ತನ್ನ ಮುಂದೆ ಬಂದು ನೀರೆರಚಲು ಅಡ್ಡಿಪಡಿಸಿದ್ದಕ್ಕೆ ಆನೆಗೆ ಕೋಪವೇ ಬಂದಿತ್ತು. ಹೀಗಾಗಿ ಸಿಬ್ಬಂದಿಯನ್ನು ಸೊಂಡಿಲಿನಿಂದ ಸೈಡಿಗೆ ಹೋಗೋ ಎನ್ನುವಂತೆ ಎತ್ತಿ ಬಿಸಾಕಿದೆ.

ನೀರಿಗೆ ಬಿದ್ದ ಸಿಬ್ಬಂದಿಗೆ ಅದೃಷ್ಟವಶಾತ್ ಬೇರೇನೂ ಆಗಲಿಲ್ಲ. ಬಳಿಕ ಆನೆ ತನ್ನ ಪಾಡಿಗೆ ತಾನು ಸೊಂಡಿಲಿನಲ್ಲಿ ನೀರು ತುಂಬಿ ಭಕ್ತರತ್ತ ಎರಚಿ ಸಂಭ್ರಮ ಮುಂದುವರಿಸಿತ್ತು. ಈ ವಿಡಿಯೋ ಈಗ ವೈರಲ್ ಆಗಿದೆ.

 
 
 
 
 
 
 
 
 
 
 
 
 
 
 

A post shared by Mangalore (@i.mangaluru)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments