Webdunia - Bharat's app for daily news and videos

Install App

ಬಿವೈ ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯದೇ ಬಿಜೆಪಿ ಅಧಿಕಾರಕ್ಕೆ ಬರಲ್ಲ

Krishnaveni K
ಸೋಮವಾರ, 2 ಡಿಸೆಂಬರ್ 2024 (12:15 IST)
Photo Credit: X
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿವೈ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವಿನ ತಿಕ್ಕಾಟ ಜೋರಾಗಿದೆ. ಈಗ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಕುಮಾರ್ ಬಂಗಾರಪ್ಪ ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಯದೇ ಇದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ಹೈಕಮಾಂಡ್ ಗೆ ದೂರು ನೀಡಿದ್ದರು. ಹೀಗಾಗಿ ಈಗ ಯತ್ನಾಳ್ ಗೆ ಕಾರಣ ಕೇಳಿ ಹೈಕಮಾಂಡ್ ನೋಟಿಸ್ ನೀಡಿದೆ. ಇದಕ್ಕೆ ಶೀಘ್ರದಲ್ಲೇ ಉತ್ತರಿಸುವುದಾಗ ಯತ್ನಾಳ್ ಕೂಡಾ ಪ್ರತಿಕ್ರಿಯಿಸಿದ್ದಾರೆ.

ಯತ್ನಾಳ್ ಬಣದಲ್ಲಿ ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಸೇರಿದಂತೆ ಕೆಲವು ಬಿಜೆಪಿ ನಾಯಕರಿದ್ದಾರೆ. ಇವರಿಗೆ ಯಾರಿಗೂ ವೈಯಕ್ತಿಕವಾಗಿ ನೋಟಿಸ್ ಬಂದಿಲ್ಲ. ಯತ್ನಾಳ್ ಗೆ ಮಾತ್ರ ನೋಟಿಸ್ ನೀಡಲಾಗಿದೆ. ಈ ಸಂಬಂಧ ಮಾಧ್ಯಮಗಳಿಗೆ ಕುಮಾರ್ ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ಬಿವೈ ವಿಜಯೇಂದ್ರ ಮಾಡುತ್ತಿರುವ ಹೊಂದಾಣಿಕೆ ರಾಜಕಾರಣ ನಿಲ್ಲಬೇಕಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯದೇ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ. ಇನ್ನು, ತಮಗೆ ವೈಯಕ್ತಿಕವಾಗಿ ನೋಟಿಸ್ ಬಂದಿಲ್ಲ. ಒಂದು ವೇಳೆ ಬಂದರೂ ಹೆದರಲ್ಲ. ನಾವು ಬಂಗಾರಪ್ಪನವರ ಮಕ್ಕಳು. ಬಂಗಾರಪ್ಪನವರ ಮಕ್ಕಳನ್ನು ಹೆದರಿಸಕ್ಕೆ ಆಗುತ್ತಾ. ನೋಟಿಸ್ ಬಂದರೆ ಉತ್ತರ ಕೊಡ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments