Webdunia - Bharat's app for daily news and videos

Install App

ತಂದೆಯೇ ಪಿಎಂ ಸ್ಥಾನ ಬಿಟ್ಟ ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ - ಕಾಂಗ್ರೆಸ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ

Webdunia
ಗುರುವಾರ, 31 ಜನವರಿ 2019 (07:57 IST)
ಬೆಂಗಳೂರು : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ತಂದೆಯೇ ಪಿಎಂ ಸ್ಥಾನ ಬಿಟ್ಟ ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ  ಎಂದು  ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜನರಿಗೆ ಮೋಸ ಮಾಡಿ ನಾನು ಏನು ಸಾಧನೆ ಮಾಡಲಿ? ಸಿಎಂ ಸ್ಥಾನ ಬಿಡಲು ನನಗೆ ಕಷ್ಟ ಏನಿಲ್ಲ ಅಧಿಕಾರದಲ್ಲಿ ಶಾಶ್ವತವಾಗಿ ಇರೋದಕ್ಕೆ ಆಗುತ್ತಾ? 16 ಸೀಟು ಪಡೆದು ನನ್ನ ತಂದೆಯವರು ಪ್ರಧಾನಿಯಾಗಿದ್ದರು. ಬಳಿಕ ಸುಲಭವಾಗಿ ತಂದೆ ಸ್ಥಾನವನ್ನು ಬಿಟ್ಟು ಬಂದಿದ್ದಾರೆ. ಅಂತವರ ಮಗನಾಗಿ ಸಿಎಂ ಸ್ಥಾನ ಬಿಡಲು ನಾನು ಹಿಂದೇಟು ಹಾಕುತ್ತೇನಾ ಎಂದು ಹೇಳಿದ್ದಾರೆ.

 

ಬೆಂಗಳೂರಿನಲ್ಲಿ 12 ವರ್ಷಗಳಿಂದ ನಿಂತಿದ್ದ ಕೆಲಸವನ್ನು ನಾನು ಪ್ರಾರಂಭ ಮಾಡಿದ್ದೇನೆ. ಎಷ್ಟು ದಿನ ಇಂತಹ ಮಾತು ನಾನು ಸಹಿಸಿಕೊಳ್ಳಲಿ. ಸರ್ಕಾರದಲ್ಲಿ ಕೆಲಸವಾಗಿಲ್ಲ ಅಂತ ಪಾಪ ಯಾರೋ ಒಬ್ಬರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ 1 ಲಕ್ಷ ಕೋಟಿ ರೂ. ಯೋಜನೆ ಕೊಟ್ಟಿರುವುದು ಅವರಿಗೆ ಗೊತ್ತಿಲ್ಲವೆಂದು ಅನಿಸುತ್ತದೆ ಎಂದು ಸಿಎಂ ಶಾಸಕ ಎಸ್.ಟಿ.ಸೋಮಶೇಖರ್ ಹೆಸರನ್ನು ಹೇಳದೇ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments