Webdunia - Bharat's app for daily news and videos

Install App

`ಒಂದು ದಿನವಾದರೂ ನನ್ನನ್ನ ಜೈಲಿಗೆ ಹಾಕಲು ನಿರ್ಧರಿಸಿದ್ದರು.

Webdunia
ಸೋಮವಾರ, 17 ಜುಲೈ 2017 (14:34 IST)
ವಿಪಕ್ಷಗಳನ್ನ ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸರನ್ನ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಧ್ಯರಾತ್ರಿ ಯಡಿಯೂರಪ್ಪನವರ ಮನೆ ಶೋಧದ ಬಗ್ಗೆ ಕಿಡಿಕಾರಿದ ಕುಮಾರಸ್ವಾಮಿ, ಮಧ್ಯರಾತ್ರಿ ಹೋಗಿ ಶೋಧ ನಡೆಸುವ ಅವಶ್ಯಕತೆ ಇರಲಿಲ್ಲ. ಶೋಧಕ್ಕೆ ಸರ್ಚ್ ವಾರೆಂಟ್ ಪಡೆದಿದ್ದರೆ..?  ಸರ್ಚ್ ಮಾಡಿದ್ದರೆ ಅದನ್ನ ಬಹಿರಂಗಪಡಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ಧಾರೆ. ಗೃಹ ಇಲಾಖೆಯ ಅವ್ಯವಸ್ಥೆಗೆ ಕೆಂಪಯ್ಯನವರೇ ಕಾರಣ ಎಂದಿರುವ ಕುಮಾರಸ್ವಾಮಿ, ಗುಪ್ತಚರ ಡಿಜಿಪಿಯಾಗಿದ್ದ ಎಂ.ಎನ್. ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆಂದು ಹೇಳಿದ್ಧಾರೆ.  

ಪೊಲೀಸ್ ಅಧಿಕಾರಿಗಳಿಗೆ ಹೇಳುವವರು ಕೇಳುವವರು ಇಲ್ಲಾದಾಗಿದೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಒಂದು ದಿನವಾದರೂ ನನ್ನನ್ನ ಜೈಲಿಗೆ ಹಾಕಲು ನಿರ್ಧರಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ಧಾರೆ. 30-35 ಕೈದಿಗಳನ್ನ ದಿಢೀರ್ ಸ್ಥಳಾಂತರ ಮಾಡಲಾಗಿದೆ. ಅವರು ಎಲ್ಲಿದ್ದಾರೆಂಬುದು ಯಾರಿಗೂ ಗೊತ್ತಿಲ್ಲ. ಈಗ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಈ ಪ್ರಕರಣವನ್ನೂ ಹಳ್ಳ ಹಿಡಿಸಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ಧಾರೆ..

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments