Webdunia - Bharat's app for daily news and videos

Install App

ಪರಿಷತ್`ನಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರಿಕೆ: ಕುಮಾರಸ್ವಾಮಿ

Webdunia
ಗುರುವಾರ, 15 ಜೂನ್ 2017 (13:39 IST)
ವಿಧಾನ ಪರಿಷತ್`ನಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೈತ್ರಿ ವಿಧಾನಪರಿಷತ್`ಗೆ ಮಾತ್ರ ಸೀಮಿತ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅವಿಶ್ವಾಸ ನಿರ್ಣಯದಿಂದ ಸಭಾಪತಿ ಶಂಕರಮೂರ್ತಿ ಪದಚ್ಯುತಿ ಪ್ರಹಸನ ಒಂದು ಹಂತಕ್ಕೆ ಬಂದಂತಾಗಿದೆ.
 

ಪರಿಷತ್ ಸಭಾಪತಿ ಪದಚ್ಯುತಿಗೆ ಅವಿಶ್ವಾಸ ನಿರ್ಣಯ ಮಂಡಿಸುವಾಗ ಕಾಂಗ್ರೆಸ್ ನಾಯಕರು ನಮ್ಮನ್ನ ಸಂಪರ್ಕಿಸಿಲ್ಲ. ಆ ಬಳಿಕವೂ ಕಾಂಗ್ರೆಸ್`ನ ನಿರ್ಣಯ ಕೈಗೊಳ್ಳುವ ನಾಯಕರು ನಮ್ಮನ್ನ ಸಂಪರ್ಕಿಸಿಲ್ಲ. ಬೆಳಗ್ಗೆ ಸಭಾಪತಿ ಸ್ಥಾನವನ್ನ ಜೆಡಿಎಸ್`ಗೆ ಬಿಟ್ಟುಕೊಡುವುದಾಗಿ ಹೇಳಿದ್ದು, ಜಾತ್ಯಾತೀತ ಶಕ್ತಿಗಳು ಒಂದಾಗಬೇಕು ಎಂದು ಹೇಳಿದ್ದಾರೆ. ಆ ದೃಷ್ಟಿ ಅವರಿಗಿದ್ದಿದ್ದರೆ ನಮ್ಮ ಜೊತೆ ಪದಚ್ಯುತಿ ಬಗ್ಗೆ ಚರ್ಚೆ ನಡೆಸಬೇಕಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಪಕ್ಷವನ್ನ ಎರಡೂ ರಾಜಕೀಯ ಪಕ್ಷಗಳು ಆಟಿಕೆಯಾಗಿ ಬಳಸುತ್ತಿವೆ. ಕಾಂಗ್ರೆಸ್ ನಾಯಕರು ವಾರದ ಮುಂದೆಯೇ ನಮ್ಮನ್ನ ಸಂಪರ್ಕಿಸಿದ್ದರೆ ಮಾತುಕತೆ ನಡೆಸಬಹದಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments