Webdunia - Bharat's app for daily news and videos

Install App

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ

Webdunia
ಸೋಮವಾರ, 25 ಸೆಪ್ಟಂಬರ್ 2017 (15:20 IST)
ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ದ್ರವಾಹಾರ ಸೇವನೆ ಮಾಡುತ್ತಿರುವ ಕುಮಾರಸ್ವಾಮಿಯವರು ಇವತ್ತು ಎದ್ದು ಸ್ವಲ್ಪ ದೂರ ನಡೆದಿದ್ದಾರೆ. ಪ್ರತೀ ಗಂಟೆಗೊಮ್ಮೆ ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬೆಳಗ್ಗೆಯೇ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದೇವೇಗೌಡರು ಮಗನ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.  ಇನ್ನೂ ಕೆಲವು ದಿನ ಐಸಿಯೂನಲ್ಲೇ ಮುಂದುವರೆಯುವಂತೆ ತಿಳಿಸಿರುವುದಾಗಿ ದೇವೇಗೌಡರು ಹೇಳಿದ್ದಾರೆ.

ಕುಮಾರಸ್ವಾಮಿಯವರಿಗೆ ವಿಶ್ರಾಂತಿ ಅಗತ್ಯವಿರುವುದರಿಂದ ಅವರ ಭೇಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರದಂತೆ ವೈದ್ಯರು ಮನವಿ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಕಳೆದ ಶನಿವಾರ ಕುಮಾರಸ್ವಾಮಿಯವರಿಗೆ ಹೃದಯದ ಟಿಶ್ಯೂ ವಾಲ್ವ್ ಬದಲಿಸುವ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. 2007ರಲ್ಲಿ ಟಿಶ್ಯೂ ವಾಲ್ವ್ ಅಳವಡಿಸಲಾಗಿತ್ತು. ಇತ್ತೀಚೆಗೆ, ಕುಮಾರಸ್ವಾಮಿ ಇಸ್ರೇಲ್`ಗೆ ಭೇಟಿ ನೀಡಿದ ಸಂದರ್ಭ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಶಸ್ತ್ರಚಿಕಿತ್ಸೆ ನಡೆಸಿ ಟಿಶ್ಯೂ ವಾಲ್ವ್ ಬದಲಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments