Select Your Language

Notifications

webdunia
webdunia
webdunia
webdunia

ಹೆಚ್‌ಡಿಕೆ ಆಗಾಗ ಯೂ ಟರ್ನ್ ಹೊಡಿತಾರೆ: ಜಗದೀಶ್ ಶೆಟ್ಟರ್

ಹೆಚ್‌ಡಿಕೆ ಆಗಾಗ ಯೂ ಟರ್ನ್ ಹೊಡಿತಾರೆ: ಜಗದೀಶ್ ಶೆಟ್ಟರ್
ಬೆಂಗಳೂರು , ಮಂಗಳವಾರ, 29 ಸೆಪ್ಟಂಬರ್ 2015 (16:11 IST)
ಆರ್.ವಿ.ದೇಶಪಾಂಡೆ ಅವರು ಅಕ್ರಮವಾಗಿ ಭೂ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಇಂದು ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಅವರು ಯಾವಾಗ ಯೂ ಟರ್ನ್ ಹೊಡೆಯುತ್ತಾರೋ ಗೊತ್ತಾಗುವುದಿಲ್ಲ. ಹಾಗಾಗಿ ನಾವು ತಟಸ್ಥವಾಗಿದ್ದೇವೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಟೀಕಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ಭೂ ಒತ್ತುವರಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡುತ್ತಿದ್ದಾರೆ. ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಾರೆ ಎಂದಾದಲ್ಲಿ ನಾನೂ ಕೂಡ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ಪ್ರಸ್ತುತ ಬಿಜೆಪಿ ನಾಯಕರು ಸುಮ್ಮನಿರುವುದೇಕೆಂದರೆ ಕುಮಾರಸ್ವಾಮಿಯವರು ಯಾವಾಗ ಯೂ ಟರ್ನ್ ಹೊಡೆಯುತ್ತಾರೆ ಎಂದು ಗೊತ್ತಾಗುವುದಿಲ್ಲ ಎಂದು ಕುಟುಕಿದರು. 
 
ಇನ್ನು ನಿನ್ನೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು, ಪ್ರವಾಸೋದ್ಯಮ ಸಚಿವ ದೇಶಪಾಂಡೆ ಅವರು 11 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳೂ ನನ್ನ ಬಳಿ ಇದೆ. ಆದರೆ ಇಷ್ಟಾದರೂ ಕೂಡ ಅರಣ್ಯ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

Share this Story:

Follow Webdunia kannada