Select Your Language

Notifications

webdunia
webdunia
webdunia
webdunia

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

Shivkumar

sampriya

ಬೆಂಗಳೂರು , ಮಂಗಳವಾರ, 21 ಮೇ 2024 (19:25 IST)
Photo By X
ಬೆಂಗಳೂರು: “ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದ್ದು ಹೀಗೆ

“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.

ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದಾಗ “ಮೊದಲು ಶಿಕ್ಷಕ, ಪದವೀದರ ಕ್ಷೇತ್ರದ ಚುನಾವಣೆ ಮುಗಿಯಲಿ ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಂಗಾಪುರ್ ವಿಮಾನ ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ, ಓರ್ವ ಸಾವು, ಹಲವು ಮಂದಿಗೆ ಗಾಯ