Select Your Language

Notifications

webdunia
webdunia
webdunia
webdunia

ಬಿಜೆಪಿ ಸರಕಾರ ಬರಲು ಕುಮಾರಸ್ವಾಮಿ ಕಾರಣ ; ಹೊಸ ಬಾಂಬ್ ಸಿಡಿಸಿದ ಸಿಎಂ ಪುತ್ರ

ಬಿಜೆಪಿ ಸರಕಾರ ಬರಲು ಕುಮಾರಸ್ವಾಮಿ ಕಾರಣ ; ಹೊಸ ಬಾಂಬ್ ಸಿಡಿಸಿದ ಸಿಎಂ ಪುತ್ರ
ಚಿಕ್ಕಬಳ್ಳಾಪುರ , ಬುಧವಾರ, 29 ಜನವರಿ 2020 (19:52 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಹೆಚ್.ಡಿ.ಕುಮಾರಸ್ವಾಮಿಯೇ ಕಾರಣ.


ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಮೈತ್ರಿ ಸರಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿಯವರ ಆಡಳಿತ ವೈಖರಿಗೆ ಶಾಸಕರು ರೋಸಿಹೋಗಿದ್ದರು. 

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದು ಗೆದ್ದಿದ್ದಾರೆ. ಹೀಗಾಗಿ ರಾಜೀನಾಮೆ ನೀಡಿದ ಶಾಸಕರ ಬಲ ಹಾಗೂ ಪರೋಕ್ಷವಾಗಿ ಹೆಚ್.ಡಿ.ಕೆ ಕಾರಣವಾಗಿರೋದ್ರಿಂದ ಬಿಜೆಪಿ ಸರಕಾರ ಬಂದಿದೆ ಅಂತ ವಿಶ್ಲೇಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ವಿಸ್ತರಣೆ ಬಳಿಕ ರಾಜ್ಯದ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ ಅಂತ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸಚಿವ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್