Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಜತೆ ಕುಮಾರಸ್ವಾಮಿ ಒಳಒಪ್ಪಂದ: ಬಚ್ಚೇಗೌಡ ಆರೋಪ

ಕಾಂಗ್ರೆಸ್ ಜತೆ ಕುಮಾರಸ್ವಾಮಿ ಒಳಒಪ್ಪಂದ: ಬಚ್ಚೇಗೌಡ ಆರೋಪ
ಬೆಂಗಳೂರು , ಶನಿವಾರ, 17 ಮೇ 2014 (17:23 IST)
ಬೆಂಗಳೂರು: ಕಾಂಗ್ರೆಸ್‌ನೊಂದಿಗೆ ಕುಮಾರಸ್ವಾಮಿ ಒಳಒಪ್ಪಂದ ಮಾಡಿಕೊಂಡಿದ್ದರಿಂದ ನನಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸೋಲುಂಟಾಗಿದೆ ಎಂದು ಬಿಜೆಪಿಯ ಬಚ್ಚೇಗೌಡ ಚಿಕ್ಕಬಳ್ಳಾಪುರದಲ್ಲಿ ಪುನರುಚ್ಚರಿಸಿದ್ದಾರೆ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಾವು  ಕಾಂಗ್ರೆಸ್‌ನಿಂದ ಕೋಟ್ಯಂತರ ರೂ. ಪಡೆದು ಒಳಒಪ್ಪಂದ ಮಾಡಿಕೊಂಡಿರುವುದಾಗಿ ಬಚ್ಚೇಗೌಡ  ಸುಳ್ಳು ಆರೋಪ ಮಾಡಿದ್ದಾರೆಂದು ಕುಮಾರಸ್ವಾಮಿ ಟೀಕಿಸಿದ್ದರು.

 ಬಚ್ಚೇಗೌಡ ಜಾತಿರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಚುನಾವಣೆ­ಯಲ್ಲಿ ಸೋಲಿನ ಭೀತಿ ಎದುರಿಸುತ್ತಿ­ರುವ ಬಚ್ಚೇಗೌಡ ಮತ್ತು ಅವರ ಬೆಂಬಲಿಗರು ಇಲ್ಲಸಲ್ಲದ ರೀತಿಯಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದು ಖಂಡನೀಯ ಎಂದು ಟೀಕಿಸಿದ್ದರು.

ಈಗ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೀರಪ್ಪ ಮೊಯ್ಲಿ ಗೆಲುವು ಗಳಿಸಿದ ಬಳಿಕ ಬಚ್ಚೇಗೌಡ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. 
 

Share this Story:

Follow Webdunia kannada