ನಿಗಮ ಮಂಡಳಿಗಳ ನೇಮಕ ಮಾಡದೇ ಫಾರಿನ್ ಟೂರ್ ಗೆ ತೆರಳಿದ ಕುಮಾರಸ್ವಾಮಿ

Webdunia
ಶನಿವಾರ, 29 ಡಿಸೆಂಬರ್ 2018 (12:40 IST)
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ನಡುವೆಯೇ ಶೀತಲ ಸಮರ ಏರ್ಪಟ್ಟಿದೆ. ಬಹುನಿರೀಕ್ಷಿತ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಹಿ ಹಾಕದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೊಸ ವರ್ಷಾಚರಣೆಗಾಗಿ ಕುಟುಂಬ ಸಮೇತರಾಗಿ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ.



ಏಕಪಕ್ಷೀಯವಾಗಿ ಕಾಂಗ್ರೆಸ್ ನಿಗಮ ಮಂಡಳಿಗಳ ಪಟ್ಟಿಯನ್ನು ತಯಾರಿಸಿರುವ ಬಗ್ಗೆ ಜಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸದಿಂದ ಮರಳಿದ ಬಳಿಕವೇ ನಿಗಮ-ಮಂಡಳಿ ನೇಮಕಕ್ಕೆ ಅನುಮೋದನೆ ದೊರೆಯಲಿದೆ ಎನ್ನಲಾಗುತ್ತಿದೆ.

 
ನಿಗಮ ಮಂಡಳಿ ಸ್ಥಾನಕ್ಕೆ ಸಿಎಂ ತಮ್ಮ ಕುಟುಂಬ ಆಪ್ತರಾದ ಪ್ರೊ.ಕೆ.ಎಸ್.ರಂಗಪ್ಪ ನೇಮಿಸಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ನಿಗಮ ಮಂಡಳಿ ಅಧ್ಯಕ್ಷರ ವಯೋಮಿತಿ 65 ಮೀರುವಂತಿಲ್ಲ. ರಂಗಪ್ಪ ಅವರ ನೇಮಕಾತಿಗಾಗಿ ಮುಂದಿನ ವಾರವೇ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲು ಮುಂದಾಗಲಿದೆಯಂತೆ. ವಯೋಮಿತಿಯನ್ನು 65ರ 70 ಕ್ಕೆ ಏರಿಸಲು ಸಿಎಂ ಪ್ಲಾನ್ ಮಾಡುವ ಮೂಲಕ ಕಾಂಗ್ರೆಸ್ ಶಾಕ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments