Webdunia - Bharat's app for daily news and videos

Install App

ಸದನಕ್ಕೆ ತಲೆತೋರಿಸಿ ಕಲಾಪಕ್ಕೆ ನಾಪತ್ತೆಯಾದ ಕುಮಾರಸ್ವಾಮಿ

Webdunia
ಶುಕ್ರವಾರ, 17 ನವೆಂಬರ್ 2017 (09:32 IST)
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಆರಂಭವಾಗಿ ನಾಲ್ಕು ದಿನ ಕಳೆದರೂ ಶಾಸಕರ ಗೈರು ಎದ್ದು ಕಾಣುತ್ತಿದೆ. ವಿಶೇಷವಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಒಮ್ಮೆ ಮಾತ್ರ ತಲೆ ತೋರಿಸಿದ್ದು ಬಿಟ್ಟರೆ, ಕಲಾಪಕ್ಕೆ ಹಾಜರಾಗಿಯೇ ಇಲ್ಲ.
 

ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಚರ್ಚೆ, ಮೌಢ್ಯ ನಿಷೇಧ ವಿಧೇಯಕ, ಕಂಬಳಕ್ಕೆ ಕಾನೂನು ಮಾನ್ಯತೆ ಸೇರಿದಂತೆ ಪ್ರಮುಖ ವಿಷಯಗಳು ಚರ್ಚೆಯಾಗುತ್ತಿರಬೇಕಾದರೆ ಜೆಡಿಎಸ್ ಪಕ್ಷದ ನಾಯಕನೇ ಕಲಾಪದಲ್ಲಿ ಪಾಲ್ಗೊಂಡಿಲ್ಲ.

ಜೆಡಿಎಸ್ ಸಮಾವೇಶಗಳಿಂದಾಗಿ ಕುಮಾರಸ್ವಾಮಿ ಸದನ ಕಲಾಪಗಳಿಗೆ ಹಾಜರಾಗಲಿಲ್ಲ ಎಂದು ಜೆಡಿಎಸ್ ಸದಸ್ಯರು ನೆಪ ಹೇಳಿದರು. ಹಾಗಿದ್ದರೂ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಈ ರೀತಿ ವಿಶೇಷ ಅಧಿವೇಶನಕ್ಕೆ ಬರದಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments