Webdunia - Bharat's app for daily news and videos

Install App

ಮೈತ್ರಿಯಲ್ಲಿ ಬಿರುಕು?: ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ತೊಲಗಲಿ ಎಂದ ಮಾಜಿ ಸಿಎಂ

Webdunia
ಶನಿವಾರ, 29 ಜೂನ್ 2019 (17:20 IST)
ಹದಿಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಲಿ. ಹೀಗಂತ ಮಾಜಿ ಸಿಎಂ ಹರಿಹಾಯ್ದಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರಬೇಕಿತ್ತು.103 ಶಾಸಕರ ಬದಲಿಗೆ 115 ಶಾಸಕರು ಇದ್ದಿದ್ದರೆ ಕೇಂದ್ರದಲ್ಲಿ ಮೋದಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರುತ್ತಿತ್ತು. ಈ ಬಗ್ಗೆ ರಾಜ್ಯದ ಜನರಿಗೆ ಕೊರಗಿದೆ. ಓಟು ಬಿಜೆಪಿಗೆ ಕೆಲಸ ಮಾಡಿ ಅಂತ ನಮ್ಮನ್ನು ಕೇಳ್ತೀರಾ ಅಂತಾ ಸೊಕ್ಕಿನ, ಧಿಮಾಕಿನ ಮಾತು ಸಿಎಂ ಹೇಳಿದ್ದಾರೆ‌.

ಅವರಿಗೆ ಜನರು ಸರಿಯಾದ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕುಡಿಯುವ ನೀರಿಗೆ ಹಾಹಾಕಾರ ಇದೆ. ಈ ಸಂದರ್ಭದಲ್ಲಿ ವಿದೇಶ ಪ್ರವಾಸ ಮಾಡುತ್ತೀರಾ? ಈ ಸಂದರ್ಭದಲ್ಲಿ ನೀವು ರಾಜ್ಯದ ಉದ್ದಗಲಕ್ಕೇ ಓಡಾಟ ಮಾಡಬೇಕಿತ್ತು ಅಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗರಂ ಆದರು.

ಕರ್ನಾಟಕದಲ್ಲಿ ದುರಹಂಕಾರ, ತುಘಲಕ್ ಸರ್ಕಾರ ನಡೆಯುತ್ತಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ಈ ಸರ್ಕಾರ ಬೀಳಬಹುದು. ನಾವಾಗಿಯೇ ಯಾವುದೇ ಎಂಎಲ್ ಎ ಯನ್ನು ಕರೆಯಲ್ಲ‌. ಅವರಾಗಿಯೇ ರಾಜೀನಾಮೆ ಕೊಟ್ಟು ಬಂದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಹದಿಮೂರೇ ತಿಂಗಳಲ್ಲಿ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆಡಳಿತ ನಡೆಸಲು ನಿಮಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ ಎಂದು ಸಿಎಂಗೆ ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments