Publish Date: Sun, 03 Sep 2017 (17:58 IST)
Updated Date: Sun, 03 Sep 2017 (18:00 IST)
ಕುಮಾರಸ್ವಾಮಿ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ಗೆ ತೆರಳಿದ್ದಾರೆ. ಮುಂದೆ ಸಿಎಂ ಆದ ಬಳಿಕ ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ. ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಜಿಲ್ಲೆಯ ಚಳ್ಳೇಕೇರಿ ತಾಲೂಕಿನ ಪರಶುರಾಂಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕೆ ಕೃಷಿ ಹಾನಿಯ ಬಗ್ಗೆ ಅಧ್ಯಯನ ನಡೆಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೆ. ಆದರೆ, ಸಿಎಂ ನನ್ನ ಪತ್ರಕ್ಕೆ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ನದಿಗಳ ಜೋಡಣೆ ಹೇಗೆ ಸಾಧ್ಯವಾಗುತ್ತದೆ? ನದಿಗಳ ಜೋಡಣೆಗೆ ಸಂವಿಧಾನ ತಿದ್ದುಪಡಿ ತರಬೇಕಾಗುತ್ತದೆ.ನದಿಗಳ ಜೋಡಣೆಗೆ ಎಲ್ಲಾ ರಾಜ್ಯಗಳು ಸಮ್ಮತಿ ಸೂಚಿಸಬೇಕಾಗುತ್ತದೆ. ನದಿಗಳ ಜೋಡಣೆ ನೋಡಲು ನಾನು ಇರುತ್ತೇನೆಯೋ ಇಲ್ಲವೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿಲ್ಲ. ಸರಕಾರಕ್ಕೆ ರೈತರ ಏಳಿಗೆ ಬೇಕಾಗಿಲ್ಲ. ಕೇವಲ ಅವರ ಓಟು ಮಾತ್ರ ಬೇಕಾಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.