ಪ್ರಾದೇಶಿಕ ಪಕ್ಷಗಳನ್ನ ಕಟ್ಟಿ ಹಾಕಲು ರಾಷ್ಟ್ರೀಯ ಪಕ್ಷಗಳು ಯತ್ನ ನಡೆಸುತ್ತಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಗಡಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಎಸ್`ಐಟಿ ಅಧಿಕಾರಿಗಳ ಮೇಲೆ ಒತ್ತಡವಿದೆ ಎಂದು ಆರೋಪಿಸಿದರು.
ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ಅವರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ ಎಂದರು.
ಇದೇವೇಳೆ, ನನ್ನ ಜನಪ್ರಿಯತೆ ತಡೆಯಲು ತಂತ್ರ ನಡೆಯುತ್ತಿದೆ. ಇದಕ್ಕೆ ನಾನು ಬಗ್ಗುವುದೂ ಇಲ್ಲ, ಅಂಜುವುದೂ ಇಲ್ಲ. ಸರ್ಕಾರ ಎಸ್ಐಟಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದು, ಇದರಲ್ಲಿ ಕೆಲ ಮಂತ್ರಿಗಳ ಕೈವಾಡವೂ ಇದೆ ಎಂದು ಆರೋಪಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದ ಜನರ ಭಾವನೆಗಳನ್ನ ಅರಿತಿದ್ದೇನೆ. ನನ್ನನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ