Webdunia - Bharat's app for daily news and videos

Install App

ನಿಖಿಲ್ ನನ್ನೂ ಬಂಧಿಸಲು ನಡೆದಿತ್ತು ಪ್ಲ್ಯಾನ್: ಕುಮಾರಸ್ವಾಮಿ ಹೇಳಿದ ಅಚ್ಚರಿಯ ಸತ್ಯ

Krishnaveni K
ಭಾನುವಾರ, 14 ಜುಲೈ 2024 (08:00 IST)
ಬೆಂಗಳೂರು: ಎಚ್ ಡಿ ರೇವಣ್ಣ ಕುಟುಂಬವಿಡೀ ಈಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಲುಗುತ್ತಿದೆ. ಇದರೊಂದಿಗೆ ದೇವೇಗೌಡರ ಕುಟುಂಬ ಸಂಕಷ್ಟದಲ್ಲಿದೆ. ಇದರ ನಡುವೆ ತಮ್ಮ ಮಗ ನಿಖಿಲ್ ನನ್ನೂ ಬಂಧಿಸಲು ಯೋಜನೆ ನಡೆದಿತ್ತು ಎಂಬ ಅಚ್ಚರಿಯ ಅಂಶವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.

ದೇವೇಗೌಡರ ಕುಟುಂಬದಲ್ಲಿ ನಿಖಿಲ್ ಮಾತ್ರ ಬಾಕಿಯಿದ್ದ. ಅವನನ್ನೂಯಾವುದಾದರೂ ಕೇಸ್ ನಲ್ಲಿ ಸಿಲುಕಿಸಿ ಬಂಧಿಸಲು ಎಲ್ಲಾ ತಯಾರಿ ನಡೆಸಿತ್ತು. ಇದಕ್ಕೆ ರಾಜ್ಯ ಸರ್ಕಾರ ಮತ್ತು ಡಿಜಿ ಮಟ್ಟದ ಪೊಲೀಸ್ ಅಧಿಕಾರಿಯೇ ಚರ್ಚೆಯನ್ನೂ ನಡೆಸಿದ್ದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ದೇವೇಗೌಡರ ಕುಟುಂಬದಲ್ಲಿ ಉಳಿದವನು ನಿಖಿಲ್ ಅಂತ ಅವನನ್ನು ಬಂಧಿಸಲು ತಯಾರಿ ನಡೆದಿತ್ತು ಎಂದಿದ್ದಾರೆ. ರಾಜ್ಯದಲ್ಲಿರುವ ಈ ಸರ್ಕಾರದಲ್ಲಿ ಹಗರಣಗಳೇ ತುಂಬಿ ತುಳುಕುತ್ತಿದೆ. ಇದು ಬೇರೆ ರಾಜ್ಯಗಳಲ್ಲೂ ಚರ್ಚೆಯಾಗುತ್ತಿದೆ. ನಾನು ಎರಡು ದಿನ ಆಂಧ್ರ, ತೆಲಂಗಾಣದಲ್ಲಿ ಪಬ್ಲಿಕ್ ಸೆಕ್ಟರ್ ಯುನಿಟ್ ಗಳ ಬಗ್ಗೆ ಚರ್ಚಿಸಲು ಹೋಗಿದ್ದಾಗ ಈ ವಿಚಾರ ಪ್ರಸ್ತಾಪವಾಗಿದೆ.

ಅಲ್ಲಿನ ಎಂಪಿಗಳು, ಶಾಸಕರು ಇಲ್ಲಿನ ಕಾಂಗ್ರೆಸ್ ಸರ್ಕಾರದ ಬಗ್ಗೆ ಹೇಳಿಕೊಂಡಾಗ ನೋವಾಯಿತು. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಪರಿಸ್ಥಿತಿ ಯಾವ ರೀತಿ ಇದೆ ಎಂದು ಗೊತ್ತಾಗುತ್ತಿದೆ. ಬೇರೆ ರಾಜ್ಯದವರೂ ನಮ್ಮ ರಾಜ್ಯದ ಬಗ್ಗೆ ಮಾತನಾಡುವಂತಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ