Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ, ವಿಜಯೇಂದ್ರ ಕೆಂಡಾಮಂಡಲ

ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ, ವಿಜಯೇಂದ್ರ ಕೆಂಡಾಮಂಡಲ
ಬೆಂಗಳೂರು , ಮಂಗಳವಾರ, 18 ಜೂನ್ 2019 (18:00 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಅವರ ಪುತ್ರ ಕೆಂಡಾಮಂಡಲರಾಗಿದ್ದಾರೆ.

ಜಿಂದಾಲ್ ಕಂಪನಿಯಿಂದ ಬಿ.ಎಸ್.ಯಡಿಯೂರಪ್ಪ 20 ಕೋಟಿ ರೂ. ಗಳನ್ನು ಚೆಕ್ ಮೂಲಕ ಪಡೆದುಕೊಂಡಿದ್ದರು. ಹೀಗಂತ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿ.ಎಸ್.ವೈ ಹಾಗೂ ಅವರ ಪುತ್ರ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಈ ರೀತಿ ಹೊಣಗೇಡಿತನದ ಮಾತನಾಡುವುದು ಸರಿಯಲ್ಲ.

ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡುವಂತೆ ಹಗುರವಾಗಿ ಮಾತನಾಡಬೇಡಿ. ಹೀಗಂತ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಇನ್ನು ಬಿ.ವೈ.ವಿಜಯೇಂದ್ರ ಟ್ವಿಟ್ ಮಾಡಿದ್ದು, ಕುಮಾರಸ್ವಾಮಿ ಹಿಟ್ ಅಂಡ್ ರನ್ ಸಂಸ್ಕೃತಿಯಿಂದ ಹೊರಬರಬೇಕು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಯಡಿಯೂರಪ್ಪರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ಗೆಳತಿ ದೋಚಿದ್ದು ಕೋಟಿ ಕೋಟಿ ಹಣ