Select Your Language

Notifications

webdunia
webdunia
webdunia
webdunia

ನಲಪಾಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್. ಡಿ ಕುಮಾರಸ್ವಾಮಿ

ನಲಪಾಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್. ಡಿ ಕುಮಾರಸ್ವಾಮಿ
ಹುಬ್ಬಳ್ಳಿ , ಬುಧವಾರ, 21 ಫೆಬ್ರವರಿ 2018 (07:06 IST)
ಹುಬ್ಬಳ್ಳಿ : ಶಾಂತಿ ನಗರ  ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಮಾಡಲಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ’ ಎಂದು ಹೇಳುವುದರ ಮೂಲಕ ಪ್ರಕರಣಕ್ಕೆ ಹೊಸ ತಿರುವೊಂದನ್ನು ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಕಂಪ್ಯೂಟರ್ ಹ್ಯಾಕಿಂಗ್ , ಬಿಟ್ ಕಾಯಿನ್ , ಹವಾಲಾ ದಂಧೆಯ ಕರಾಳ ಮುಖ ಇದೆ. ಕೂಡಲೇ ಪ್ರಕರಣವನ್ನು ಸೈಬರ್ ಕ್ರೈಮ್ ವಿಭಾಗದಿಂದ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಕರಾಳ ಸತ್ಯ ಬಹಿರಂಗವಾಗಲಿ. ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಕಾಂಗ್ರಸ್ ನಾಯಕರ ಪುಂಡಾಟಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದೆ' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅವಧಿಗೂ ಮುನ್ನವೇ ಅಧಿವೇಶನ ಮೊಟಕುಗೊಳಿಸಲು ಚಿಂತನೆ