Select Your Language

Notifications

webdunia
webdunia
webdunia
webdunia

ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ: ಸಿಎಂ ಲೇವಡಿ

ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ: ಸಿಎಂ ಲೇವಡಿ
ಚಿಕ್ಕಬಳ್ಳಾಪುರ , ಭಾನುವಾರ, 21 ಜನವರಿ 2018 (15:27 IST)
ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ ನಡೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಜಿಲ್ಲೆಯ ಬಾಗೆಪಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಣ್ಣಿನ ಮಗ ಟೈಟಲ್ ಪಡೆಯಲು ಪ್ರಯತ್ನಿಸುತ್ತಿದ್ದರೆ, ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ನಾನೊಬ್ಬ ಪ್ರಾಮಾಣಿಕ ಮಣ್ಣಿನ ಮಗ ಎಂದು ಹೇಳಿಕೊಳ್ಳುತ್ತಿರುವುದಾಗಿ ವ್ಯಂಗ್ಯವಾಡಿದ್ದಾರೆ.
 
ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ ನಡೆಸಿದ್ದಾರೆ. ಹಾಗಾದ್ರೆ ನಾವ್ಯಾರು ಮಣ್ಣಿನ ಮಕ್ಕಳಲ್ಲವೇ? ಎಂದು ಪ್ರಶ್ನಿಸಿದ ಅವರು ನಿಜವಾಗಿಯೂ ನಾನೇ ಮಣ್ಣಿನ ಮಗ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹತಾಷರಾಗಿ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ ಮುಂದೆ ಅಧಿಕಾರಕ್ಕೆ ಬರೋಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ಹೆಗಡೆ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ