ಖಾಸಗಿ ವೈದ್ಯರನ್ನು ನಿಮ್ಮ ಗುಲಾಮರು ಅಂದುಕೊಡಿದ್ದೀರಾ?: ಕುಮಾರಸ್ವಾಮಿ ಕಿಡಿ

Webdunia
ಶುಕ್ರವಾರ, 3 ನವೆಂಬರ್ 2017 (14:06 IST)
ಖಾಸಗಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಮನಬಂದಂತೆ ಹೇಳಿಕೆ ನೀಡುವ ಸಚಿವ ರಮೇಶ್ ಕುಮಾರ್ ವೈದ್ಯರನ್ನು ತಮ್ಮ ಮನೆಯ ಗುಲಾಮರು ಅಂದುಕೊಡಿದ್ದಾರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಯಲ್ಲಿ ಎಲ್ಲಿ ಒಳ್ಳೆಯ ಚಿಕಿತ್ಸೆ ದೊರೆಯುತ್ತದೆ. ಖಾಸಗಿ ಆಸ್ಪತ್ರೆಗಳ ಬದಲಿಗೆ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಿದರೆ ಜನತೆ ಯಾಕೆ ಖಾಸಗಿ ಆಸ್ಪತ್ರೆಗೆ ಹೋಗ್ತಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕುಮಾರಸ್ವಾಮಿ, ಎಲ್ಲಾ ವೈದ್ಯರು ಕೆಟ್ಟವರಿರುವುದಿಲ್ಲ. ಇದು ಸಿಎಂ ಸಿದ್ದರಾಮಯ್ಯ ಹುಚ್ಚುತನದ ಪರಮಾವಧಿಯಾಗಿದೆ. ಯಾವುದೇ ಮಸೂದೆ ಜಾರಿಗೆ ತರುವ ಮುನ್ನ ಜನತೆ ಬಳಿ ತೆರಳಿ ವಿಚಾರಿಸಿ, ನಂತರ ತೀರ್ಮಾನ ತೆಗೆದುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.
 
ರಮೇಶ್ ಕುಮಾರ್ ಬರೀ ಸಂತೆ ಭಾಷಣಾ ಮಾಡ್ತಾರೆ. ಅವರು ಬಳಸುವ ಭಾಷೆಯನ್ನು ಕೂಡಾ ಗಮನಿಸಿದ್ದೇನೆ. ರಾಜ್ಯದಾದ್ಯಂತ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದರೂ ನನಗೆ ಗೊತ್ತೆ ಇಲ್ಲ ಎಂದು ಹೇಳಿವುದು ನಾಚಿಕೆಗೇಡಿತನದ ಸಂಗತಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments