Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಎರಡಲ್ಲ, ಸಾಕಷ್ಟು ಮನೆಗಳಿವೆ: ವಿ.ಎಸ್.ಉಗ್ರಪ್ಪ

Webdunia
ಭಾನುವಾರ, 28 ಫೆಬ್ರವರಿ 2016 (14:45 IST)
ನಮ್ಮ ಮನೆ ಬಾಗಿಲು ಸದಾ ತೆರೆದಿರುತ್ತದೆ ಯಾವಾಗಬೇಕಾದರೂ ಬಂದು ನೋಡಿಕೊಂಡು ಹೋಗಿ ಎಂದು ಕುಮಾರಸ್ವಾಮಿಯವರು ಹೇಳುತ್ತಾರೆ. ಆದರೆ, ಅವರಿಗೆ ಎರಡಲ್ಲ, ಸಾಕಷ್ಟು ಮನೆಗಳಿರುವುದರಿಂದ ಅವರು ಯಾವ ಮನೆಯಲ್ಲಿರುತ್ತಾರೋ ಗೊತ್ತಿಲ್ಲ. ಯಾವ ಮನೆಯಲ್ಲಿರುತ್ತೇನೆ ಎಂದು ಎಚ್ಡಿಕೆ ಹೇಳಿದರೆ ನೋಡಿಕೊಂಡು ಬರಬಹುದು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಟಾಂಗ್ ನೀಡಿದ್ದಾರೆ.  
 
ದುಬಾರಿ ವಾಚ್ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಬಾರಿ ಸ್ಪಷ್ಟೀಕರಣ ನೀಡಿದ್ದರೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪದೇ ಪದೇ ಅದೇ ವಿಷಯವನ್ನು ಹರಿಬಿಡುತ್ತಿದ್ದಾರೆ ಎಂದು 
 
ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿರುವ ಅವರ ಗೆಳೆಯರು ವಾಚ್ ಗಿಫ್ಟ್ ಮಾಡಿದ್ದರು ಎಂದು ಕುಮಾರಸ್ವಾಮಿಯವರ ಗೆಳೆಯರೇ ಮಾಹಿತಿ ನೀಡಿದ್ದಾರೆ. ಕೋಟಿ ರೂಪಾಯಿ ಬೆಲೆಬಾಳುವ ವಾಚ್ ಗಿಫ್ಟ್ ಬಂದಿತ್ತು ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.
 
ಗಿಫ್ಟ್ ಬಂದ ವಾಚ್‌ನ್ನು ಕುಮಾರಸ್ವಾಮಿಯವರೇ ನೀವು ಹರಾಜು ಹಾಕುತ್ತೀರಾ? 1.3 ಕೋಟಿ ರೂಪಾಯಿ ಬೆಲೆಬಾಳುವ ವಾಚ್ ಕಟ್ಟು ನೀಡುವ ಸಿಎಂ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ
 
ಸದಾ ಸಣ್ಣ ತಪ್ಪು ಮಾಡಿದ್ದೇನೆ ಎಂದು ಹೇಳುವ ಕುಮಾರಸ್ವಾಮಿ ಅದು ಯಾವ ತಪ್ಪು ಎನ್ನುವುದನ್ನು ತಾಕತ್ತಿದ್ರೆ ರಾಜ್ಯದ ಜನತೆಯ ಮುಂದೆ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು
 
ಇಲ್ಲ ಸಲ್ಲದ ಆರೋಪ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವಾ?ನಾವು ಕೇಳಿದ ಪ್ರಶ್ನೆಗಳಿಗೆ ಇಲ್ಲಿಯವರೆಗೆ ಉತ್ತರಿಸಿದ ಕುಮಾರಸ್ವಾಮಿ ಪದೇ ಪದೇ ಸಿಎಂ ಸಿದ್ದರಾಮಯ್ಯನವರನ್ನು ಕೆಣಕುತ್ತಿದ್ದಾರೆ ಎಂದು ಗುಡುಗಿದರು.
 
ಹೈಕಮಾಂಡ್ ಅನಗತ್ಯವಾಗಿ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಇಳಿಸುವುದಿಲ್ಲ. ಸಿಎಂ ಸಿದ್ದರಾಮಯ್ಯ ಪೂರ್ಣ ಅವಧಿಯ ಅಧಿಕಾರ ನಡೆಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments