Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್ ಕಣ್ರೀ : ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್ ಕಣ್ರೀ : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ , ಶನಿವಾರ, 10 ಜೂನ್ 2017 (17:38 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್. ಅವರ ಆರೋಪಗಳಿಗೆ ತಲೆಬುಡವಿರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ಇಂಧನ ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಆರೋಪ ಮಾಡುವುದರಿಂದ ಯಾವುದೇ ಸಾಧನೆಯಾಗುವುದಿಲ್ಲ. ದಾಖಲೆಗಳಿದ್ದಲ್ಲಿ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.
 
ಯಾರೇ ಆಗಲಿ ಯಾವುದೇ ಆರೋಪ ಮಾಡುವ ಮುನ್ನ ಸೂಕ್ತ ದಾಖಲೆಗಳನ್ನಿಟ್ಟರಬೇಕು. ದಾಖಲೆಗಳಿಲ್ಲದೇ ಆರೋಪ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿರುಗೇಟು ನೀಡಿದರು.
 
ಶಾಶ್ವತ ನೀರಾವರಿ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸರಕಾರ, ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ಕೇಂದ್ರ ಸರಕಾರ ಮನಸ್ಸು ಮಾಡಿದ್ದಲ್ಲಿ ಮಹದಾಯಿ ಯೋಜನೆ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹೆತ್ತ ತಾಯಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ರನಿಗೆ ಕಠಿಣ ಶಿಕ್ಷೆ