ಜಮೀರ್ ಅಹ್ಮದ್ ಗೆಸ್ಟ್ ಹೌಸ್ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶಾಸಕ ಜಮೀರ್ ಅಹ್ಮದ್, ಅಖಂಡ ಶ್ರೀನಿವಾಸಯ್ಯ, ಕೆ.ಗೋಪಾಲಯ್ಯ ಮತ್ತು ಜೆಡಿಎಸ್ ಪಕ್ಷದ 14 ಮಂದಿ ಬಿಬಿಎಂಪಿ ಸದಸ್ಯರು ಸಭೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.
ಕೆಲ ಹೊತ್ತಿನಲ್ಲಿಯೇ ಸಮಾಲೋಚನೆ ಆರಂಭವಾಗಲಿದೆ. ಇಂದು ಸಂಜೆ ಸಭೆಯ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರವಾನಿಸಲಾಗುವುದು ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.