Select Your Language

Notifications

webdunia
webdunia
webdunia
webdunia

ನಿಮ್ಮ ಜಿಲ್ಲೆಯ ಡಿಸಿಗೆ ರಕ್ಷಣೆ ನೀಡಲಾಗದವರು ನೀವು: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ನಿಮ್ಮ ಜಿಲ್ಲೆಯ ಡಿಸಿಗೆ ರಕ್ಷಣೆ ನೀಡಲಾಗದವರು ನೀವು: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು , ಮಂಗಳವಾರ, 12 ಜುಲೈ 2016 (12:45 IST)
ನಿಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಕ್ಷಣೆ ನೀಡಲಾಗದ ಸಿಎಂ ನೀವು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಲೇವಡಿ ಮಾಡಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ನಿಮ್ಮ ಸರಕಾರದಲ್ಲಿ ನಿಮಗೆ ಒತ್ತಡಗಳಿರಬಹುದು. ಆದರೆ, ನಿಮ್ಮ ಒತ್ತಡಗಳಿಂದ ಅಮಾಯಕರಿಗೆ ತೊಂದರೆಯಾಗದಂತಿರಲಿ. ರಾಜ್ಯದಲ್ಲಿ  ಅಧಿಕಾರಿಗಳ ಆತ್ಮಹತ್ಯೆಯನ್ನು ತಡೆಯಿರಿ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
 
ನೀವು ಹಿರಿಯರು ಹಿರಿಯರಂತೆ ಕೆಲಸ ಮಾಡಿ. ನಿಮ್ಮ ಕಾರ್ಯವೈಖರಿಯನ್ನು 6 ಕೋಟಿ ಮತದಾರರು ನೋಡುತ್ತಿದ್ದಾರೆ. ಅವರು ಮನಸ್ಸು ಮಾಡಿದರೆ ನಿಮ್ಮನ್ನು ಮೂಲೆಗುಂಪು ಮಾಡುತ್ತಾರೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಧ್ಯೆ ವಾಗ್ವಾದ ನಡೆದಿದ್ದು, ನಿಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಕ್ಷಣೆ ನೀಡಲಾಗದ ಸಿಎಂ ನೀವು ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದರೆ, ನೋಡಿಕೊಂಡು ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: 134 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ