Select Your Language

Notifications

webdunia
webdunia
webdunia
webdunia

ಸಚಿವ ಅಂಜನೇಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಸಚಿವ ಅಂಜನೇಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು , ಶುಕ್ರವಾರ, 19 ಆಗಸ್ಟ್ 2016 (15:30 IST)
ಪರಿಶಿಷ್ಟ ಜಾತಿಗೆ ಸೇರಿದ ವಿಕಲಚೇತನ ವಿದ್ಯಾರ್ಥಿ ಸಹಾಯ ಕೋರಿ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಬಳಿ ಮನವಿ ಮಾಡಿಕೊಂಡಿದ್ದ. ವಿದ್ಯಾರ್ಥಿ ಇಂಗ್ಲೀಷ್‌ನಲ್ಲಿ ಮನವಿ ಪತ್ರ ಬರೆದು ತಂದಿದ್ದ ಎಂಬ ಕಾರಣಕ್ಕಾಗಿ ಕನ್ನಡದಲ್ಲಿ ಪತ್ರ ಬರೆದುಕೊಂಡು ಬರುವಂತೆ ಹೇಳಿ ವಾಪಸ್ ಕಳುಹಿಸಿದ್ದಾರೆ. ಇವರು ಆಂಜನೇಯ, ಆಧುನಿಕ ಅಂಬೇಡ್ಕರ್ ಬೇರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.  
 
ಶಿವಾನಂದ ಸೊನ್ನಾವನ ಎಂಬ ವಿಕಲಚೇತನ ವಿದ್ಯಾರ್ಥಿ ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದ.
 
ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ಶಿವಾನಂದ ಸೊನ್ನಾವನ ಅವರು ಐದು ವರ್ಷದ ವಿದ್ಯಾಭ್ಯಾಸದ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬುಲಂದಶಹರ್ ಪ್ರಕರಣ: ಆರೋಪಿಗಳು ನಡೆಸಿದ್ದಾರಂತೆ 50 ಗ್ಯಾಂಗ್ ರೇಪ್