ಮೋದಿಗೆ ಲೇವಡಿ ಮಾಡಿದ ಕುಮಾರಸ್ವಾಮಿ

Webdunia
ಗುರುವಾರ, 3 ಮೇ 2018 (18:46 IST)
ಬಳ್ಳಾರಿ ರೆಡ್ಡಿ ಬ್ರದರ್ಸ್ ಗಳ ಬಗ್ಗೆ ಸಮರ್ಥನೆ ಮಾಡಿಕೊಂಡ ಪ್ರಧಾನಿ ಮೋದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜೆಡಿಎಸ್ ಸಮಾವೇಶದ ಬಳಿಕ ಮಾತನಾಡಿದ ಹೆಚ್ ಡಿಕೆ, ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ನಡೆದ ಕಳ್ಳ ಸಾಗಾಣಿಕೆ ಹಾಗೂ ಅಲ್ಲಿಯ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಅವ್ರು ನೈತಿಕತೆ ಉಳಿಸಿಕೊಂಡಿಲ್ಲವೆಂದು  ತೀವ್ರ ವಾಗ್ದಾಳಿ ನಡೆಸಿದ್ರು. ಇನ್ನು ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ.ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಸಿದ್ದರಾಮಯ್ಯ, ಪಾದಯಾತ್ರೆ ಹೆಸ್ರಲ್ಲಿ ಅಧಿಕಾರ ಪಡೆದ್ರು. ಆದ್ರೆ ಬಳ್ಳಾರಿ ಜನರನ್ನು ಬಡತನದಲ್ಲಿಟ್ಟರೆಂದು ಆಕ್ರೋಶ ವ್ಯಕ್ತಪಡಿಸಿದರು. 
 
ಅಲ್ಲದೆ  ಸಿದ್ದರಾಮಯ್ಯ ಅವ್ರ 5 ವರ್ಷದ ಆಡಳಿತದಲ್ಲಿ ಅಕ್ರಮ ಗಣಿಗಾರಿಕೆ ವಿಚಾರವಾಗಿ ಯಾರ ಮೇಲೆ ಕ್ರಮಕೈಗೊಂಡಿದೆ ತೋರಿಸಲಿ ಎಂದು ಪ್ರಶ್ನಿಸಿದ್ರು. ಇನ್ನು ಮೋದಿ ಅವ್ರು ಹೇಳಿದ ಹಾಗೆ ಸಿದ್ದರಾಮಯ್ಯ ಪಕ್ಷಾಂತರಿ ಸಿಎಂ. ನಾಳೆ ಬಿಜೆಪಿಗೆ ಹೋದ್ರೂ ಆಶ್ಚರ್ಯ ಪಡುವ ಹಾಗಿಲ್ಲವೆಂದರು.ಇನ್ನು ಚುನಾವಣಾ ಫಲಿತಾಂಶದಲ್ಲಿ ಅತಂತ್ರ ಬಂತಂದ್ರೆ ಇದೇ ಸಿದ್ದರಾಮಯ್ಯ ನೇತೃತ್ವದಲ್ಲಿ 50-60 ಜನ ಶಾಸಕರ ಜೊತೆ ಬಿಜೆಪಿ ಬಾಗಿಲು ತಟ್ಟಿದ್ರೂ ಆಶ್ಚರ್ಯಪಡುವ ಹಾಗಿಲ್ಲವೆಂದು ಸಿದ್ದು ವಿರುದ್ಧ ಹೆಚ್ ಡಿಕೆ ವ್ಯಂಗ್ಯವಾಡಿದ್ರು. 
 
ಇನ್ನು ದಲಿತ ಬಾಂಧವರು ಆತಂಕ ಪಡುವ ಅವಶ್ಯಕತೆ ಇಲ್ಲ. ಸಂವಿಧಾನ ಬದಲಿಸಲು ನಾವು ಬಿಡುವುದಿಲ್ಲ ಎಂದು ಅನಂತಕುಮಾರ ಹೆಗಡೆಗೆ ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಮುಂದಿನ ಸುದ್ದಿ
Show comments