Select Your Language

Notifications

webdunia
webdunia
webdunia
webdunia

ರೈತರಿಗೆ ಕನಿಷ್ಠ 25 ಸಾವಿರ ಪರಿಹಾರ ನೀಡಿ: ಕುಮಾರಸ್ವಾಮಿ

ರೈತರಿಗೆ ಕನಿಷ್ಠ 25 ಸಾವಿರ ಪರಿಹಾರ ನೀಡಿ: ಕುಮಾರಸ್ವಾಮಿ
ಮಂಡ್ಯ , ಗುರುವಾರ, 6 ಏಪ್ರಿಲ್ 2017 (19:18 IST)
ಬರಗಾಲದಿಂದ ತತ್ತರಿಸಿದ ರೈತನಿಗೆ ಸರಕಾರ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 
 
ರೈತರು ಬರಗಾಲದಿಂದ ತ್ತರಸಿ ಸಂಕಷ್ಟದಲ್ಲಿದ್ದರೆ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಜನತೆಯನ್ನು ವಂಚಿಸುವಲ್ಲಿ ಪೈಪೋಟಿ ನಡೆಸುತ್ತಿವೆ. ಚುನಾವಣೆ ಪ್ರಚಾರವನ್ನೇ ಪ್ರಮುಖ ಕಾಯಕವಾಗಿಸಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವಾಗಲಿ ಅಥವಾ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವಾಗಲಿ ರೈತರ ನೆರವಿಗೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಆತ್ಮಹತ್ಯೆಗೆ ಶರಣಾದ ರೈತ ಶಿವಣ್ಣನ ಪುತ್ರಿಯರ ವಿದ್ಯಾಬ್ಯಾಸದ ಹೊಣೆಯನ್ನು ಹೊರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಪ್ಪು ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ: ಬಿಜೆಪಿ ನಾಯಕರಿಗೆ ಪರಮೇಶ್ವರ್ ತಾಕೀತು