Webdunia - Bharat's app for daily news and videos

Install App

Kumbhmela Stampede: ಮಹಾಕುಂಭಮೇಳದಲ್ಲಿ ಮಹಾ ದುರಂತ: ಕಾಲ್ತುಳಿತದಲ್ಲಿ ಹಲವರಿಗೆ ಗಾಯ

Krishnaveni K
ಬುಧವಾರ, 29 ಜನವರಿ 2025 (09:12 IST)
Photo Credit: X
ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಮಹಾ ದುರಂತ ಸಂಭವಿಸಿದ್ದು, ಕಾಲ್ತುಳಿತದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ. ಮೌನಿ ಅಮವಾಸ್ಯೆ ನಿಮಿತ್ತ ಇಂದು ಪ್ರಯಾಗ್ ರಾಜ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ.

ಇಂದು ಮೌನಿ ಅಮವಾಸ್ಯೆ ನಿಮಿತ್ತ ಪುಣ್ಯ ಸ್ನಾನ ಮಾಡಲು ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ತ್ರಿವೇಣಿ ಸಂಗಮದ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಇದರಿಂದಾಗಿ ನೂಕುನುಗ್ಗಲು ಉಂಟಾಗಿದೆ. ಹೀಗಾಗಿ ಹಲವರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಸುಮಾರು 25 ಮಂದಿ ಮಹಿಳೆಯರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದಲ್ಲಿ ಅವಘಡ ಸಂಭವಿಸಿದರೆ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ನಿರ್ಮಿಸಲಾಗಿತ್ತು.

ಸಾಕಷ್ಟು ಜನ ಜಂಗುಳಿಯಿರುವುದರಿಂದ ಆಂಬ್ಯುಲೆನ್ಸ್ ಗಳೂ ಸಂಚರಿಸಲು ಕಷ್ಟವಾಗಲಿದೆ. ಇಂದು ಮೌನಿ ಅಮವಾಸ್ಯೆ ನಿಮಿತ್ತ ಕೋಟ್ಯಾಂತರ ಭಕ್ತರು ಇಂದು ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಜನದಟ್ಟಣೆ ವಿಪರೀತ ಎನ್ನುವಷ್ಟು ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments