Webdunia - Bharat's app for daily news and videos

Install App

ಕುಂದಾಪುರ ಫೈನಾನ್ಸ್ ಮಾಲೀಕ ಕೊಲೆಗಾರ 24 ಗಂಟೆಯಲ್ಲಿ ಅರೆಸ್ಟ್!

Webdunia
ಸೋಮವಾರ, 2 ಆಗಸ್ಟ್ 2021 (18:58 IST)
ಕುಂದಾಪುರದ ಕಾಳಾವರದ ಪೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಾವರದ ನಂದಿಕೇಶ್ವರ ಕಾಂಪ್ಲೆಕ್ಸ್ ನಲ್ಲಿ ಡ್ರೀಮ್ಸ್ ಫೈನಾನ್ಸ್ ನಡೆಸಿಕೊಂಡು ಬರುತ್ತಿದ್ದ ಅಜೇಂದ್ರ ಶೆಟ್ಟಿ ಅವರನ್ನು ಜುಲೈ 30ರಂದು ಕಚೇರಿಯ ಒಳಗೆಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು.
ಕೊಲೆ ನಂತರ ಕುತ್ತಿಗೆಯಲ್ಲಿದ್ದ ಚೈನ್ ಹಾಗೂ ಹೊಸ ಹೋಂಡಾ ಸಿಟಿ ಕಾರನ್ನು ಸುಲಿಗೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದು, ಪ್ರಾಥಮಿಕ ಹಂತದ ತನಿಖೆಯ ವೇಳೆ ಫೈನಾನ್ಸ್ ಪಾಲುದಾರ ಅನೂಪ್ ಶೆಟ್ಟಿಯ ಮೇಲೆ ಸಂಶಯಗೊಂಡಿದ್ದರು. 
ಅನೂಪ್ ಶೆಟ್ಟಿ ವಿಚಾರಣೆಗೆ ಮುಂದಾದಾಗ ಆತ ತಲೆಮರೆಸಿಕೊಂಡಿದ್ದು, ಪೊಲೀಸರ ಅನುಮಾನ ಹೆಚ್ಚಿಸಿತು. ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಅನೂಪ್ ಶೆಟ್ಟಿಯನ್ನು ಟೋಲ್ ಗೇಟ್ ನಲ್ಲಿ ಅಳವಡಿಸಿದ್ದ ಸಿಸಿಟಿವಿ ಆಧಾರದ ಮೇಲೆ ಪತ್ತೆ ಹಚ್ಚಿದ್ದು ಗೋವಾದಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಒಪ್ಪಿಕೊಂಡಿದ್ದಾನೆ.
ಗೋವಾದ ಕೊಲ್ವಾ ಬೀಚ್ ಬಳಿ ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೇ ಆತ ಸುಲಿಗೆ ಮಾಡಿರುವ ಕಾರನ್ನು ವಶಪಡಿಸಿಕೊಂಡಿದ್ದಾರೆ. ಫೈನಾನ್ಸ್ ನಲ್ಲಿ ಹಣದ ವ್ಯವಹಾರವೇ ಕೊಲೆಗೆ ಮುಖ್ಯ ಕಾರಣ ಹಾಗೂ ಹೊಸ ಖರೀದಿ ವೇಳೆ ಉಂಟಾದ ಮನಸ್ತಾಪದಿಂದ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

‘ಬಳ್ಳಾರಿ ಚಲೋ’ ಮೊದಲ ಹಂತದ ಹೋರಾಟಕ್ಕೆ ನಾಳೆ ತೆರೆ; ಜನಪರ ಹೋರಾಟ ನಿರಂತರ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮುಂದಿನ ಸುದ್ದಿ
Show comments