ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಬಿಕ್ಕಟ್ಟು: ಇಬ್ಬರ ಜಗಳದಲ್ಲಿ ಲಾಭ ಪಡೆದ ಕೆವಿ ಗೌತಮ್

Krishnaveni K
ಶನಿವಾರ, 30 ಮಾರ್ಚ್ 2024 (12:19 IST)
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಕೊನೆಗೂ ಬಗೆಹರಿದಿದೆ. ರಮೇಶ್ ಕುಮಾರ್, ಮುನಿಯಪ್ಪ ಬಣದ ನಡುವಿನ ಜಗಳದಲ್ಲಿ ಮಾಜಿ ಮೇಯರ್ ಪುತ್ರ ಕೆವಿ ಗೌತಮ್ ಲಾಭ ಪಡೆದಿದ್ದಾರೆ.

ಕೋಲಾರ ಬಿಕ್ಕಟ್ಟು ಬಗೆಹರಿಸಲು ಕಾಂಗ್ರೆಸ್ ನಾಯಕರು ಎರಡೂ ಬಣಗಳನ್ನು ಬಿಟ್ಟು ಮೂರನೆಯವರಿಗೆ ಟಿಕೆಟ್ ನೀಡಿದೆ. ಇದೀಗ ಕಾಂಗ್ರೆಸ್ ಎಲ್ಲಾ 28 ಕ್ಷೇತ್ರಗಳಿಗೆ ಸ್ಪರ್ಧಿಗಳನ್ನು ಘೋಷಿಸಿದಂತಾಗಿದೆ. ಕೋಲಾರ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಕೋಲಾರ ಲೋಕಸಭಾ ಟಿಕೆಟ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣನಿಗೆ ನೀಡಬೇಕು ಎಂಬುದು ಅವರ ಬಣದ ವಾದವಾಗಿತ್ತು. ಇನ್ನೊಂದೆಡೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಮುನಿಯಪ್ಪ ಕಡೆಯವರಿಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬಂಡಾಯವೆದ್ದಿದ್ದರು.

ಈ ಬಿಕ್ಕಟ್ಟು ಬಗೆಹರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಂಟ್ರಿ ಕೊಡಬೇಕಾಯಿತು. ಇದೀಗ ಎರಡೂ ಬಣದವರನ್ನು ಬಿಟ್ಟು ಮಾಜಿ ಮೇಯರ್ ವಿಜಯ್ ಕುಮಾರ್ ಪುತ್ರ ಕೆವಿ ಗೌತಮ್ ಗೆ ಮಣೆ ಹಾಕಲಾಗಿದೆ.  ಅಲ್ಲಿಗೆ ಎರಡು ಬಣದವರ ಜಗಳದಲ್ಲಿ ಗೌತಮ್ ಲಾಭ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments