Webdunia - Bharat's app for daily news and videos

Install App

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

Krishnaveni K
ಬುಧವಾರ, 18 ಜೂನ್ 2025 (17:53 IST)
ಬೆಂಗಳೂರು: ಐಟಿ ಮತ್ತು ಬಿಪಿಒ ಸೆಕ್ಟರ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಅವಧಿಯನ್ನು 9 ರಿಂದ 10 ಗಂಟೆಗೆ ಹೆಚ್ಚಿಸಲು ಕರ್ನಾಟಕ ಸರ್ಕಾರ  ನಿಯಮ ಬದಲಾವಣೆ ಮಾಡಲು ಹೊರಟಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

1961 ರ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ಕರಡು ತಿದ್ದುಪಡಿ ಮಾಡಲಾಗಿದೆ. ಈ ಸಂಬಂಧ ಇಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದಿನಕ್ಕೆ 9 ರಿಂದ 10 ಗಂಟೆ ಕೆಲಸದ ಅವಧಿ ಹೆಚ್ಚಿಸಲು ಪ್ರಸ್ತಾವನೆ ಇಡಲಾಗಿದೆ.

ಆದರೆ ಇದಕ್ಕೆ ಐಟಿ-ಬಿಟಿ ವಲಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಕಾರ್ಮಿಕ ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗಿದೆ. ಕೆಲಸದ ಅವಧಿ ಮತ್ತಷ್ಟು ಹೆಚ್ಚಳ ಮಾಡುವುದರಿಂದ ಕಾರ್ಮಿಕರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂಬುದು ಸಂಘಟನೆಗಳ ವಾದವಾಗಿದೆ.

ಈಗಿನ ನಿಯಮದ ಪ್ರಕಾರ ಕೆಲಸದ ಅವಧಿ 9 ಗಂಟೆ ಮೀರಬಾರದು ಎಂದು ನಿಯಮವಿದೆ. ಇದೀಗ ಓವರ್ ಟೈಮ್ ಕೂಡಾ ಸೇರಿ ಇದನ್ನು 12 ಗಂಟೆಗೆ ವಿಸ್ತರಿಸುವ ಪ್ರಸ್ತಾಪವಿದೆ. ಓವ್ ಟೈಮ್ ಅವಧಿ ಇದುವರೆಗೆ 3 ತಿಂಗಳಲ್ಲಿ 50 ಗಂಟೆಗೆ ಸೀಮಿತವಾಗಿತ್ತು. ಆದರೆ ಇದೀಗ 144 ಗಂಟೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ.

ಆದರೆ ಸರ್ಕಾರದ ಈ ಪ್ರಸ್ತಾವನೆಗೆ ಕರ್ನಾಟಕ ಐಟಿ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಕೆಲಸದ ಅವಧಿ 12 ಗಂಟೆಗೆ ವಿಸ್ತರಿಸಿದರೆ ಈಗಿರುವ ಮೂರು ಅವಧಿಯ ಕೆಲಸವನ್ನು ಎರಡು ಅವಧಿಗೆ ಕಡಿತಗೊಳಿಸಬೇಕಾಗುತ್ತದೆ. ಆಗ ಸಾಕಷ್ಟು ಜನ ಉದ್ಯೋಗ ಕಳೆದುಕೊಳ್ಳಬಹುದು. ಈಗಾಗಲೇ ಯುವ ಜನಾಂಗ ಕೆಲಸದೊತ್ತಡದಿಂದಾಗಿ ಮಾನಸಿಕ ಒತ್ತಡ ಅನುಭವಿಸುತ್ತಿದೆ. ಈಗ ಅವಧಿ ಹೆಚ್ಚಿಸಿದಲ್ಲಿ ಯವ ಜನಾಂಗದ ಮೇಲೆ ಪರಿಣಾಮ ಬೀರಲಿದೆ ಎಂಬುದು ಒಕ್ಕೂಟದ  ವಾದವಾಗಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಬೇಕೆಂದು ಸಂಸ್ಥೆಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿತ್ತು. ಅದರಂತೆ ಈಗ ರಾಜ್ಯ ಸರ್ಕಾರ ಅವಧಿ ಹೆಚ್ಚಿಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments