Webdunia - Bharat's app for daily news and videos

Install App

ಹೊಸ ವರ್ಷಕ್ಕೆ ಕಾರ್ಮಿಕರಿಗೆ ಉಚಿತ ಬಸ್ ಪಾಸ್

Webdunia
ಶನಿವಾರ, 11 ಡಿಸೆಂಬರ್ 2021 (18:04 IST)
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬAಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ, ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬಸ್ ಸೇವೆ ಜಾರಿಗೆ ಕಾರ್ಮಿಕ ಇಲಾಖೆ ಮುಂದಡಿ ಇರಿಸಿತ್ತು. ಈ ಸಂದರ್ಭದಲ್ಲಿ ಇಲಾಖೆಯು ಶೇ.80ರಷ್ಟನ್ನು ತಾನು ಭರಿಸುವ ಭರವಸೆ ನೀಡಿತ್ತಲ್ಲದೆ, ಇನ್ನುಳಿದ ಶೇ.20ರಷ್ಟನ್ನು ರಿಯಾಯ್ತಿ ನೀಡುವುದು ಅಥವಾ ಸಾರಿಗೆ ಇಲಾಖೆಯೇ ಭರಿಸುವ ಪ್ರಸ್ತಾವನೆಯನ್ನು ಇರಿಸಿತ್ತು. ಆರಂಭಿಕ ಹಂತದಲ್ಲಿ ಈ ಪ್ರಸ್ತಾವನೆಗೆ ಮೌಖಿಕ ಸಮ್ಮತಿ ಸೂಚಿಸಿದ್ದ ಸಾರಿಗೆ ಇಲಾಖೆ ಇದೀಗ 'ತನ್ನ ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಶೇ.20 ರಿಯಾಯ್ತಿ ಅಥವಾ ತಾನು ಭರಿಸುವುದು ಅಸಾಧ್ಯ' ಎಂದು ತಿಳಿಸಿದೆ. ಹೀಗಾಗಿ ಶ್ರಮಿಕ ವರ್ಗದ ಏಳಿಗೆಯ ಏಕಮೇವ ಉದ್ದೇಶದಿಂದ ಜಾರಿ ಮಾಡಲಾಗುತ್ತಿರುವ ಈ ಯೋಜನೆ ಅನುಷ್ಠಾನದ ಕಡಕ್ ನಿರ್ಧಾರ ಕೈಗೊಂಡಿರುವ ಕಾರ್ಮಿಕ ಸಚಿವರು, ಶೇ.100ರಷ್ಟು ಮೊತ್ತವನ್ನು ಪಾವತಿಸಿಯಾದರೂ ರಾಜ್ಯದಾದ್ಯಂತ ಜಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರವೇ ರಾಜ್ಯದಾದ್ಯಂತ ಶ್ರಮಿಕ ವರ್ಗಕ್ಕೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ವೇದಿಕೆ ಸಿದ್ಧಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments