Webdunia - Bharat's app for daily news and videos

Install App

ನಮ್ಮ ಮೆಟ್ರೋಗೆ ಹರಿದು ಬಂದ ಲಕ್ಷ ಲಕ್ಷ ಆದಾಯ

Webdunia
ಸೋಮವಾರ, 14 ಆಗಸ್ಟ್ 2023 (18:00 IST)
ಶಕ್ತಿ ಯೋಜನೆ ಜಾರಿ ಯಾದಾಗಿನಿಂದ ನಮ್ಮ ಮೆಟ್ರೋ ಲಾಸ್ ನಲ್ಲಿ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಇದರ ಮಧ್ಯೆಯೂ ಇದೀಗ, ನಮ್ಮ ಮೆಟ್ರೋಗೆ ಲಕ್ಷ ಲಕ್ಷ ಆದಾಯ ಹರಿದು ಬರುತ್ತಿದೆ.ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಉದ್ಯಾನ ನಗರಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಇದರ ತದ್ವಿರುದ್ಧವಾಗಿದ್ದು ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಶಕ್ತಿ ಯೋಜನೆಯಿಂದ ಬಿಎಂಟಿಸಿ ಬಸ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದರು. ಇದರಿಂದ ಬಸ್ಗಳು ರಶ್ ಆದವು. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯಮಿ ಹಾಗೂ ಪುರುಷರು ಕಿಕ್ಕಿರಿದು ತುಂಬಿದ್ದ ಬಸ್ಗಳಲ್ಲಿ ಪ್ರಯಾಣಿಸಲು ಇಚ್ಚಿಸದೆ ಮೆಟ್ರೋದಲ್ಲಿ ಪ್ರಯಾಣಿಸುತಿರೊದರಿಂದ ನಮ್ಮ ಮೆಟ್ರೋ ಕೂಡ ಲಾಭದಲ್ಲಿ ಲಾಭದಾಯಕವಾಗಿ ನಡಿಯುತ್ತಿದೆ.

ಮೇ ತಿಂಗಳಲ್ಲಿ ಸರಾಸರಿ 5.6 ಲಕ್ಷ ಪ್ರಯಾಣಿಕರು ಪ್ರತಿದಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದರು. ಶಕ್ತಿ ಯೋಜನೆ ಜಾರಿ ನಂತರ ಪ್ರಯಾಣಿಕರ ಸಂಖ್ಯೆ ದಿನಕ್ಕೆ 6.1 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೇ ಪ್ರಯಾಣಿಕರ ಸಂಖ್ಯೆ 40,000ಕ್ಕೆ ಏರಿಕೆಯಾಗಿದೆ. ಜುಲೈನಲ್ಲಿ ಶುಕ್ರವಾರದವರೆಗೆ ದೈನಂದಿನ ಪ್ರಯಾಣಿಕರ ಸಂಖ್ಯೆ 6.1 ಲಕ್ಷ ಗಡಿ ದಾಟಿದೆ. ಇದರ ಹಿಂದಿನವಾರ ಜುಲೈ 15 ರಂದು 6.7 ಲಕ್ಷ ಜನರು ಪ್ರಯಾಣಿಸುವ ಮೂಲಕ ಸರ್ವಕಾಲಿಕ ದಾಖಲೆಯಾಗಿದೆ. ಕೆಲವು ದಿನಗಳಿಂದ ಪ್ರಯಾಣಿಕರ ಸಂಖ್ಯೆ 6.6 ಲಕ್ಷದ ಗಡಿ ದಾಟಿದೆ. ಇದರಿಂದ ದಿನಕ್ಕೆ 15 ಲಕ್ಷ ಆದಾಯ ಹರಿದು ಬರುತ್ತಿದೆ ಎಂದು ಎಂದು ಬಿಎಂಆಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.ಶಕ್ತಿ ಯೋಜನೆ ಇಂದಾಗಿ ನಮ್ಮ ಮೆಟ್ರೋಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಹರಿದು ಬರುತ್ತಿರೋದು ಬಿಎಂಆರ್ ಸಿಎಲ್ ಶಕ್ತಿ ಬಂದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments