Select Your Language

Notifications

webdunia
webdunia
webdunia
webdunia

ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು
ಧಾರವಾಡ , ಭಾನುವಾರ, 23 ಜೂನ್ 2019 (19:53 IST)
ತಮ್ಮ ಕೈ ಚಳಕವನ್ನು ತೋರಿರುವ ಖದೀಮರು ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಎಗರಿಸಿರುವ ಘಟನೆ ನಡೆದಿದೆ.

ಮನೆಯೊಂದರ ಹಿಂದಿನ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಅಪಾರ ಮೊತ್ತದ ಚಿನ್ನದ ಆಭರಣಗಳನ್ನು ದೋಚಿಕೊಂಡು ಪಲಾಯನ ಗೈದ ಘಟನೆ ನಡೆದಿದೆ.

ಧಾರವಾಡದ ಗೋಪಾಲಪುರದಲ್ಲಿ ಈ ಘಟನೆ ನಡೆದಿದೆ. ಗೋಪಾಲನಗರದ ನಿವಾಸಿ ರವೀಂದ್ರ ಗಜಾನನ ನಾಡಗೌಡ ಎನ್ನುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಹಿಂದಿನ ಬಾಗಿಲನ್ನು ಮುರಿದು 8 ಲಕ್ಷ 67 ಸಾವಿರ ರೂಪಾಯಿ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ಮಧ್ಯಾಹ್ನದ ನಂತರ ಹಗಲಲ್ಲೇ ಈ ಘಟನೆ ನಡೆದಿರುವುದು ಬಡಾವಣೆ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧಕ್ಕೆ ಆತ ಮಾಡಿದ್ದೇನು ಗೊತ್ತಾ?