Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಹಣಕ್ಕೂ ಕುತ್ತು: ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

Krishnaveni K
ಬುಧವಾರ, 20 ನವೆಂಬರ್ 2024 (16:04 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಹಣಕ್ಕೂ ಕುತ್ತು ಬರುತ್ತದಾ ಎಂಬ ಅನುಮಾನಗಳಿಗೆ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಈಗ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಕೆಲವರಿಗೆ ಅರ್ಹತೆಯಿದ್ದರೂ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದರ ಬಗ್ಗೆ ಆಕ್ರೋಶಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ನಿಂದ ಪಡೆಯುತ್ತಿದ್ದ ಸೌಲಭ್ಯಗಳಿಗೂ ಕತ್ತರಿ ಬೀಳುವ ಆತಂಕದಲ್ಲಿ ಜನರಿದ್ದಾರೆ.

ಹೀಗಾಗಿ ಇಂದು ಮಾಧ್ಯಮಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಕಡಿತವಾಗುತ್ತಾ ಎಂಬ ಅನುಮಾನಗಳಿಗೆ ಉತ್ತರ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಾಗಿರುವುದರಿಂದ ಗೃಹಲಕ್ಷ್ಮಿ ಹಣವೂ ಬಂದ್ ಆಗುತ್ತದಾ ಎಂಬ ಆತಂಕ ಬೇಡ ಎಂದಿದ್ದಾರೆ.

‘ಗೃಹಲಕ್ಷ್ಮಿ ಯೋಜನೆ ಯಾರು ಬಿಪಿಎಲ್ ಮತ್ತು ಎಪಿಎಲ್ ಹೊಂದಿರುತ್ತಾರೋ ಮತ್ತು ಯಾರು ತೆರಿಗೆ ಕಟ್ಟುವುದಿಲ್ಲವೋ ಅವರಿಗೆ ಸಿಗುತ್ತದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಹೀಗಾಗಿ ಈಗ ಬಿಪಿಎಲ್ ನಿಂದ ಎಪಿಎಲ್ ಗೆ ಬಂದರೂ ಅವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments