Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧ ಭೂ ಆಕ್ರಮದ ಆರೋಪ

Webdunia
ಮಂಗಳವಾರ, 29 ಮಾರ್ಚ್ 2022 (20:27 IST)
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮತ್ತೊಂದು ಭೂ ಹಗರಣ ಅರೋಪ ಕೇಳಿ ಬಂದಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಚಾಣಕ್ಯ ವಿವಿ ಸೆಂಟರ್ ಫರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕಾನೂನು ಬಾಹಿರವಾಗಿ 116 ಎಕರೆ ಭೂಮಿ ಮಂಜೂರು ಮಾಡಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ನಾಗರಭಾವಿಯಲ್ಲಿರುವ ಚಾಣಕ್ಯ ವಿವಿ ಸೆಂಟರ್ ಫರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಿಂದ 116 ಎಕರೆ ಭೂಮಿಯನ್ನು ಮಂಜೂರು ಮಾಡಿ ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಲಾಭ ಮಾಡಿಕೊಡಲು ಸರ್ಕಾರದ ಮಾರ್ಗಸೂಚಿ ದರಕ್ಕಿಂತಲೂ ಕಡಿಮೆ ದರ ನಿಗದಿ ಮಾಡಿ, ಸರ್ಕಾರದ ಬೊಕ್ಕಸಕ್ಕೆ 136. 76 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಈ ಮೂಲಕ ಖಾಸಗಿ ಸಂಸ್ಥೆಗೆ ಲಾಭ ಮಾಡಿ ಅಕ್ರಮ ಎಸಗಿದ್ದಾರೆ', ಎಂದು ಆರೋಪಿಸಿ ಕೋಲಾರ ಮೂಲದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದಾರೆ.
 
ಈ ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರದಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿ ಬಂದಾಗ ಸಿಎಂ ಹುದ್ದೆಯಿಂದ ಕೆಳಗೆ ಇಳಿದಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗಲೇ ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಯಡಿಯೂರಪ್ಪ ಸಿಎಂ ಆಗಿ ಕಾರ್ಯ ನಿರ್ವಹಿಸುವಾಗಲೇ ಬಂಧನಕ್ಕೆ ಒಳಗಾಗಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಯಡಿಯೂರಪ್ಪ ಸಿಎಂ ಆಗಿ ರಾಜ್ಯವನ್ನಾಳಿದ್ದರು. ಇದೀಗ ಮತ್ತೊಂದು ಭೂ ಹಗರಣ ಸುತ್ತಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸನ್ ರೂಫ್ ಕಾರಿನ ಮೇಲೆ ನಡು ರಸ್ತೆಯಲ್ಲೇ ನಡೆಯಿತು ರೊಮ್ಯಾನ್ಸ್

ಆ ಇಬ್ಬರು ಶಾಸಕರಿಂದ ಪಕ್ಷಕ್ಕೇ ಮುಜುಗರವಾಗುತ್ತಿತ್ತು: ಬಿವೈ ವಿಜಯೇಂದ್ರ

Anil Kumble: ರಗಳೆಯೇ ಬೇಡ ಎಂದು ಅನಿಲ್ ಕುಂಬ್ಳೆಗೆ ದೊಡ್ಡ ಹೊಣೆ ಕೊಟ್ಟ ರಾಜ್ಯ ಸರ್ಕಾರ

IMD: ಜೂನ್‌ 1ರ ವರೆಗೆ ದೇಶದ ಈ ಭಾಗದಲ್ಲಿ ಭಾರೀ ಮಳೆ

ಸಿಲಿಕಾನ್ ಸಿಟಿಯಲ್ಲಿ ಮತ್ತೇ ಟೋಯಿಂಗ್ ಆರಂಭ: ಪರಮೇಶ್ವರ್ ಅಧಿಕೃತ ಘೋಷಣೆ

ಮುಂದಿನ ಸುದ್ದಿ
Show comments