Webdunia - Bharat's app for daily news and videos

Install App

ಹಾಸನದಲ್ಲಿ ಜಮೀನು ಗೋಲಮಾಲ್: ಸಚಿವ ರೇವಣ್ಣ ಗುಡುಗಿದ್ದೇನು?

Webdunia
ಶನಿವಾರ, 1 ಸೆಪ್ಟಂಬರ್ 2018 (17:40 IST)
ಹಾಸನ ಜಿಲ್ಲೆಯಲ್ಲಿ  2446 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ನೀಡಲಾಗಿತ್ತು. ಕೆಲವು ಪ್ರಭಾವಿಗಳು ಪಡೆದ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ ಎಂದು ಲೋಕೋಪಯೋಗಿ ‌ಸಚಿವ ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಹಾಸನದಲ್ಲಿ ಜಮೀನು ಗೋಲ್ ಮಾಲ್ ಭಾರಿ ಪ್ರಮಾಣದಲ್ಲಿ ನಡೆದಿದೆ ಎಂದು ಸ್ವತಃ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಇದಲ್ಲದೇ ಐಐಟಿಗೆ ಮೀಸಲಾಗಿದ್ದ ಜಾಗವನ್ನು ಕಬಳಿಸಲು‌ ಕೆಲವರು ಹುನ್ನಾರ ಮಾಡಿದ್ದಾರೆ. ಇದರಲ್ಲಿ KIADB ಅಧಿಕಾರಿ ಗಳು ಶಾಮೀಲಾಗಿದ್ದಾರೆ. ಈ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕೆಂದು  ರೇವಣ್ಣ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಶೀಘ್ರ ಸಂಬಂಧಪಟ್ಟವರ ಸಭೆ ಕರೆದು ಎಲ್ಲಾ ಮಾಹಿತಿ ಪಡೆಯುವೆ. ಕಾರ್ಖಾನೆಗೆಂದು ನಮ್ಮ 
ರೈತರ ನೂರಾರು ಎಕರೆ ಜಾಗ ಪಡೆದವರು ಕನ್ನಡಿಗರಿಗೇ  ಕೆಲಸ ಕೊಟ್ಟಿಲ್ಲ ಎಂದು ಹಿಮತ್ ಸಿಂಕಾ ಟೆಕ್ಸ್ ಟೈಲ್ಸ್ ಕಾರ್ಖಾನೆ ವಿರುದ್ಧ ಗಂಭೀರ ಆರೋಪ ಮಾಡಿದರು. ಜಾಗ ಖರೀದಿ ಮಾಡಿ, ಮತ್ತೊಬ್ಬರಿಗೆ ಬಾಡಿಗೆ ಕೊಡುವ ದಂಧೆ ನಡೆಯುತ್ತಿದೆ. ಬಡವರ ಶೋಷಿಸುವವರನ್ನು  ನಾನು ಸಹಿಸಲ್ಲ. ಮಂತ್ರಿಗಿರಿ ಇರುತ್ತೇ, ಹೋಗುತ್ತೇ ಇದನ್ನು ನೆಚ್ಚಿಕೊಂಡು ನಾನು ‌ಕುಳಿತಿಲ್ಲ. ಒಂದು ವಾರ ‌ಕಾಲಾವಕಾಶ ಕೊಡಿ, ಭ್ರಷ್ಟರನ್ನು ಬಲಿ ಹಾಕುತ್ತೇನೆ ಎಂದು ಗುಡುಗಿದರು. ಜಿಲ್ಲೆ & ರಾಜ್ಯದಲ್ಲಿ ಭೂ ಸ್ವಾಧೀನ ವಿಷಯದಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಹಾಸನದಲ್ಲಿ ಸಚಿವ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments