Select Your Language

Notifications

webdunia
webdunia
webdunia
webdunia

ಸಂತ್ರಸ್ತರ ಮನೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ ಸಚಿವ

ಸಂತ್ರಸ್ತರ ಮನೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ ಸಚಿವ
ಬೆಳಗಾವಿ , ಸೋಮವಾರ, 4 ನವೆಂಬರ್ 2019 (18:58 IST)
ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಚಿವರು ಭೂಮಿ ಪೂಜೆ ನೆರವೇರಿಸಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಸಂತ್ರಸ್ತ ಕುಟುಂಬದ ಮನೆ ನಿರ್ಮಾಣಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಈಗಾಗಲೇ ಮನೆ ನಿರ್ಮಾಣಕ್ಕೆ ಮೊದಲ ಕಂತಿನ ಒಂದು ಲಕ್ಷ ರೂಪಾಯಿ ಪಡೆದುಕೊಂಡಿರುವ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಮಾಂಜರಿ ಗ್ರಾಮದಲ್ಲಿ ಚಾಲನೆ ನೀಡಿದರು.

ಕುಸಿದಿರುವ ಮನೆಗಳ ಪರಿಶೀಲನೆಗೆ ಆಗಮಿಸಿದ ಸಚಿವ ಸೋಮಣ್ಣ ಅವರಿಗೆ ಸಂತ್ರಸ್ತರ ಕುಟುಂಬದ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ನಡುವೆ ನಿಂತ ಯುವಕರ ಪುಂಡಾಟ - ಬಸ್ ಚಾಲಕನಿಗೆ ಆಗಿದ್ದೇನು?