Webdunia - Bharat's app for daily news and videos

Install App

ಭೂ ಹಗರಣ ಆರೋಪ: ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿಎಂ ಪುತ್ರ ಸಿದ್ದತೆ

Webdunia
ಮಂಗಳವಾರ, 10 ಅಕ್ಟೋಬರ್ 2017 (13:19 IST)
ಮುಖ್ಯಮಂತ್ರಿ ಸಿದ್ದರಾಮಯ್ಯ 300 ಕೋಟಿ ಮೌಲ್ಯದ ಭೂ ಹಗರಣ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಿಎಂ ಪುತ್ರ ಯತೀಂದ್ರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯರವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶ ಮತ್ತು ಚುನಾವಣೆ ಪ್ರಚಾರಕ್ಕಾಗಿ ಯಾವುದೇ ವಿಷಯಗಳಿಲ್ಲವಾದ್ದರಿಂದ ಇಂತಹ ಬೇಜವಾಬ್ದಾರಿ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಕಾವೇರಿ ನಿವಾಸದಲ್ಲಿ ವಕೀಲರೊಂದಿಗೆ ಚರ್ಚೆ ನಡೆಸಿರುವ ಯತೀಂದ್ರ, ಪುಟ್ಟಸ್ವಾಮಿ ಬಿಡುಗಡೆ ಮಾಡಿದ ದಾಖಲೆಗಳ ಸಮೇತ ಕೇಸ್ ದಾಖಲಿಸಲು ಸಿದ್ದತೆ ನಡೆಸುವಂತೆ ವಕೀಲರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬೆಂಗಳೂರಿನ ಉತ್ತರ ಭಾಗದಲ್ಲಿರುವ ಭೂಪಸಂದ್ರದ ಸರ್ವೆ ನಂಬರ್ 20 ಮತ್ತು ಸರ್ವೆ ನಂಬರ್ 21 ರಲ್ಲಿ 6.26 ಎಕರೆ ಭೂಮಿಯ ಮೌಲ್ಯ 300 ಕೋಟಿ ರೂಪಾಯಿಗಳಾಗಿದ್ದು ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಪುಟ್ಟಸ್ವಾಮಿ ಬಾಂಬ್ ಸಿಡಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments