Webdunia - Bharat's app for daily news and videos

Install App

ಜಿಂದಾಲ್ ಗೆ ಭೂಮಿ: ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ

Webdunia
ಶುಕ್ರವಾರ, 14 ಜೂನ್ 2019 (15:02 IST)
ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಇಂದಿನ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ. ಹೀಗಂತ ಸಚಿವರು ಹೇಳಿದ್ದಾರೆ.

ರಾಜಭವನದಲ್ಲಿ ಸಚಿವ ಕೆ. ಜೆ. ಜಾರ್ಜ್ ಹೇಳಿಕೆ ನೀಡಿದ್ದು, ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಗೊಂದಲ ಉಂಟಾದ ಹಿನ್ನಲೆಯಲ್ಲಿ ಮರು ಪರಿಶೀಲನೆ ಮಾಡ್ತಿದ್ದೇವೆ ಎಂದರು.

ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಡಿಸಿಎಂ ಆಗಿದ್ದ ವೇಳೆಯೇ 2000 ಎಕರೆ ನೀಡಿ ಆದೇಶ ಮಾಡಿದ್ರು. ನಾವೇನೂ ಹೊಸದಾಗಿ ಆದೇಶ ಮಾಡ್ತಿಲ್ಲ ಎಂದರು.

ಜಿಂದಾಲ್ ಗುಡ್ ಬಿಸಿನೆಸ್ ಮನ್. ಲಾಭ ಇಲ್ಲದೇ ಯಾರೂ ಬಿಜಿನೆಸ್ ಮಾಡಲ್ಲ ಎಂದರು. ಈ ಹಿಂದೆ ಸದಾನಂದಗೌಡರ ಕಾಲದಲ್ಲೇ ಒಡಂಬಡಿಕೆ ಆಗಿತ್ತು. ಲೀಸ್ ಕಂ ಸೇಲ್ ಡೀಡ್ ಮಾಡಲಾಗಿದೆ. ಯಡಿಯೂರಪ್ಪನವರ ಅವಧಿಯಲ್ಲೇ ಇದಕ್ಕೆ ಒಪ್ಪಿಗೆ ಸಿಕ್ಕಿತ್ತು. ಬಿಎಸ್ ಯಡಿಯೂರಪ್ಪರ ನಿರ್ಧಾರವನ್ನ ಆಗಲೇ ನಾನು ಸ್ವಾಗತಿಸಿದ್ದೆ. ಈಗಲೂ ನಾನು ಸ್ವಾಗತಿಸುತ್ತೇನೆ ಎಂದರು.

ಸಂಸ್ಥೆ 60 ಸಾವಿರ ಕೋಟಿ ಬಂಡವಾಳ ಹೂಡಿದೆ. 25 ಸಾವಿರ ಜನರಿಗೆ ಉದ್ಯೋಗ ಒದಗಿಸಿದೆ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆದಾಯ ಸಂಸ್ಥೆಯಿಂದ ಬರುತ್ತಿದೆ. ಹೀಗಾಗಿ ಅಂದಿನ ಒಪ್ಪಂದ ಅಂತಿಮಗೊಳಿಸಿದ್ದೇವೆ. ಆದರೂ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಮತ್ತೆ ಕ್ಯಾಬಿನೆಟ್ ಮುಂದಿಟ್ಟಿದ್ದೇವೆ. ಸಾರ್ವಜನಿಕರಿಗೆ ಸಂಶಯಬರಬಾರದೆಂದು ಇಟ್ಟಿದ್ದೇವೆ. ಇಂದು ಕ್ಯಾಬಿನೆಟ್ ಡಿಶಿಷನ್ ತೆಗೆದುಕೊಳ್ಳಲಿದೆ ಅಂತ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments