Webdunia - Bharat's app for daily news and videos

Install App

ಜಿಂದಾಲ್ ಗೆ ಭೂಮಿ: ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ

Webdunia
ಶುಕ್ರವಾರ, 14 ಜೂನ್ 2019 (15:02 IST)
ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಇಂದಿನ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ. ಹೀಗಂತ ಸಚಿವರು ಹೇಳಿದ್ದಾರೆ.

ರಾಜಭವನದಲ್ಲಿ ಸಚಿವ ಕೆ. ಜೆ. ಜಾರ್ಜ್ ಹೇಳಿಕೆ ನೀಡಿದ್ದು, ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಗೊಂದಲ ಉಂಟಾದ ಹಿನ್ನಲೆಯಲ್ಲಿ ಮರು ಪರಿಶೀಲನೆ ಮಾಡ್ತಿದ್ದೇವೆ ಎಂದರು.

ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಡಿಸಿಎಂ ಆಗಿದ್ದ ವೇಳೆಯೇ 2000 ಎಕರೆ ನೀಡಿ ಆದೇಶ ಮಾಡಿದ್ರು. ನಾವೇನೂ ಹೊಸದಾಗಿ ಆದೇಶ ಮಾಡ್ತಿಲ್ಲ ಎಂದರು.

ಜಿಂದಾಲ್ ಗುಡ್ ಬಿಸಿನೆಸ್ ಮನ್. ಲಾಭ ಇಲ್ಲದೇ ಯಾರೂ ಬಿಜಿನೆಸ್ ಮಾಡಲ್ಲ ಎಂದರು. ಈ ಹಿಂದೆ ಸದಾನಂದಗೌಡರ ಕಾಲದಲ್ಲೇ ಒಡಂಬಡಿಕೆ ಆಗಿತ್ತು. ಲೀಸ್ ಕಂ ಸೇಲ್ ಡೀಡ್ ಮಾಡಲಾಗಿದೆ. ಯಡಿಯೂರಪ್ಪನವರ ಅವಧಿಯಲ್ಲೇ ಇದಕ್ಕೆ ಒಪ್ಪಿಗೆ ಸಿಕ್ಕಿತ್ತು. ಬಿಎಸ್ ಯಡಿಯೂರಪ್ಪರ ನಿರ್ಧಾರವನ್ನ ಆಗಲೇ ನಾನು ಸ್ವಾಗತಿಸಿದ್ದೆ. ಈಗಲೂ ನಾನು ಸ್ವಾಗತಿಸುತ್ತೇನೆ ಎಂದರು.

ಸಂಸ್ಥೆ 60 ಸಾವಿರ ಕೋಟಿ ಬಂಡವಾಳ ಹೂಡಿದೆ. 25 ಸಾವಿರ ಜನರಿಗೆ ಉದ್ಯೋಗ ಒದಗಿಸಿದೆ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆದಾಯ ಸಂಸ್ಥೆಯಿಂದ ಬರುತ್ತಿದೆ. ಹೀಗಾಗಿ ಅಂದಿನ ಒಪ್ಪಂದ ಅಂತಿಮಗೊಳಿಸಿದ್ದೇವೆ. ಆದರೂ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಮತ್ತೆ ಕ್ಯಾಬಿನೆಟ್ ಮುಂದಿಟ್ಟಿದ್ದೇವೆ. ಸಾರ್ವಜನಿಕರಿಗೆ ಸಂಶಯಬರಬಾರದೆಂದು ಇಟ್ಟಿದ್ದೇವೆ. ಇಂದು ಕ್ಯಾಬಿನೆಟ್ ಡಿಶಿಷನ್ ತೆಗೆದುಕೊಳ್ಳಲಿದೆ ಅಂತ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments