ನಂದಿಬೆಟ್ಟದಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ಕುಸಿತ: ಇಂದಿನಿಂದಲೇ ಸಂಚಾರ ಬಂದ್!

Webdunia
ಭಾನುವಾರ, 29 ಆಗಸ್ಟ್ 2021 (19:12 IST)
ಬೆಂಗಳೂರು ಹೊರವಲಯದ ಪ್ರವಾಸಿ
ತಾಣವಾದ ನಂದಿಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತದ ವರದಿಯಾಗಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಕೂಡ ಕುಸಿದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಬಳಿ ಭೂ ಕುಸಿತದ ಹಿನ್ನೆಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಾತ್ಕಾಲಿಕ ರಸ್ತೆಯೂ ಕುಸಿದಿದೆ.
ತಾತ್ಕಾಲಿಕ ರಸ್ತೆ ಕುಸಿದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಹಿಟಾಚಿ ಯಂತ್ರದ ಮಾಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.
ಶಾಶ್ವತ ರಸ್ತೆ ನಿರ್ಮಾಣ ಕಾಮಗಾರಿಗೆ 2 ತಿಂಗಳು ಬೇಕಾಗಬಹುದು. ತಾತ್ಕಾಲಿಕ ರಸ್ತೆಯಲ್ಲಿ ಸಹ ಸಂಚಾರವನ್ನು ಇಂದಿನಿಂದಲೇ ಬಂದ್‌ ಮಾಡಲಾಗಿದೆ.
ನಂದಿಬೆಟ್ಟದ ಮೇಲೆ ಇದ್ದವರನ್ನೆಲ್ಲಾ ಸ್ಥಳಾಂತರ ಮಾಡಿ ತಾತ್ಕಾಲಿಕ ರಸ್ತೆ ಬಂದ್‌ ಮಾಡಲಾಗಿದೆ. ಮೇಲಿದ್ದ ವಾಹನಗಳನ್ನ ಸ್ಥಳಾಂತರ ಮಾಡಿ ಕಾಮಗಾರಿ ಆರಂಭ‌ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments