Webdunia - Bharat's app for daily news and videos

Install App

ನಂದಿಬೆಟ್ಟದಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ಕುಸಿತ: ಇಂದಿನಿಂದಲೇ ಸಂಚಾರ ಬಂದ್!

Webdunia
ಭಾನುವಾರ, 29 ಆಗಸ್ಟ್ 2021 (19:12 IST)
ಬೆಂಗಳೂರು ಹೊರವಲಯದ ಪ್ರವಾಸಿ
ತಾಣವಾದ ನಂದಿಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತದ ವರದಿಯಾಗಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಕೂಡ ಕುಸಿದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಬಳಿ ಭೂ ಕುಸಿತದ ಹಿನ್ನೆಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಾತ್ಕಾಲಿಕ ರಸ್ತೆಯೂ ಕುಸಿದಿದೆ.
ತಾತ್ಕಾಲಿಕ ರಸ್ತೆ ಕುಸಿದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಹಿಟಾಚಿ ಯಂತ್ರದ ಮಾಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.
ಶಾಶ್ವತ ರಸ್ತೆ ನಿರ್ಮಾಣ ಕಾಮಗಾರಿಗೆ 2 ತಿಂಗಳು ಬೇಕಾಗಬಹುದು. ತಾತ್ಕಾಲಿಕ ರಸ್ತೆಯಲ್ಲಿ ಸಹ ಸಂಚಾರವನ್ನು ಇಂದಿನಿಂದಲೇ ಬಂದ್‌ ಮಾಡಲಾಗಿದೆ.
ನಂದಿಬೆಟ್ಟದ ಮೇಲೆ ಇದ್ದವರನ್ನೆಲ್ಲಾ ಸ್ಥಳಾಂತರ ಮಾಡಿ ತಾತ್ಕಾಲಿಕ ರಸ್ತೆ ಬಂದ್‌ ಮಾಡಲಾಗಿದೆ. ಮೇಲಿದ್ದ ವಾಹನಗಳನ್ನ ಸ್ಥಳಾಂತರ ಮಾಡಿ ಕಾಮಗಾರಿ ಆರಂಭ‌ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments