Select Your Language

Notifications

webdunia
webdunia
webdunia
webdunia

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ಕರಾವಳಿ ಕರ್ನಾಟಕ ಮಳೆ

Sampriya

ಹಾಸನ , ಗುರುವಾರ, 26 ಜೂನ್ 2025 (18:07 IST)
Photo Credit X
ಹಾಸನ: ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಇದರಿಂದ ಬೆಂಗಳೂರು-ಮಂಗಳೂರು  ಸಂಪರ್ಕ ಕಡಿತವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. 

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ.

ಮಂಗಳೂರಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿಚಕ್ರ ವಾಹನಕ್ಕೆ ಟೋಲ್ ವದಂತಿ: ಸ್ಪಷ್ಟನೆ ಕೊಟ್ಟ ನಿತಿನ್ ಗಡ್ಕರಿ